ಅಕ್ರಮವಾಗಿ ಯಾವುದೇ ದಾಖಲೆಗಳಿಲ್ಲದೆ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣ ವಶಪಡಿಸಿಕೊಳ್ಳಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಡಿಸಿಪಿ ನಂದಗಾವಿ, ವ್ಯಕ್ತಿಯೋರ್ವ ಖಾಸಗಿ ಬಸನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇಲೆ ಧಾರವಾಡ ಎಸಡಿಎಂ ಆಸ್ಪತ್ರೆ ಬಳಿ ದಾಳಿ ಮಾಡಿ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಅಭಿಷೇಕ್ ಎಂಬಾತನನ್ನು ಬಂಧಿಸಿ ಬಂಧಿತನಿಂದ 1 ಕೆಜಿ 101 ಗ್ರಾಂ ಚಿನ್ನಾಭರಣ ಹಾಗೂ 1 ಕೆಜಿ 463 ಗ್ರಾಂ ವಶಪಡಿಸಿಕೊಳ್ಳಲಾಗಿದೆ. ಅಭಿಷೇಕ್ ಮುಂಬಯಿಂದ ಹುಬ್ಬಳ್ಳಿಯ ಕೆಲವು ಬಂಗಾರದ ಅಂಗಡಿಯವರಿಗೆ ಬಿಲ್ ಮತ್ತು ಜಿಎಸ್ಟಿ ಇಲ್ಲದೇ ಬಂಗಾರದ ಆಭರಣಗಳನ್ನು ತಯಾರಿಸಿ ಹುಬ್ಬಳ್ಳಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ತಿಳಿಸಿದರು.
ಅಭಿಷೇಕ್ ಮಹಾವೀರ ಕೊರಿಯರ್ ನಲ್ಲಿ ಕೆಲಸ ಮಾಡ್ತಿದ್ದ. ಎಷ್ಟು ದಿನದಿಂದ ಅಕ್ರಮವಾಗಿ ಚಿನ್ನಾಭರಣವನ್ನು ಸಾಗಿಸುತ್ತಿದ್ದ ಎನ್ನುವ ಬಗ್ಗೆ ತನಿಖೆಯನ್ನು ನಡೆಸಿದ್ದೇವೆ. ಈ ಕುರಿತಂತೆ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಬೇರೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಬೇಕಿದೆ ಎಂದು ಡಿಸಿಪಿ ಹೇಳಿದರು.