Karunadu Studio

ಉತ್ತರ ಕರ್ನಾಟಕ ಬೆಳಗಾವಿ ರಾಜಕೀಯ

ಬೆಳಗಾವಿ ಅಧಿವೇಶನ ಹಿನ್ನೆಲೆ; ಮಹಾರಾಷ್ಟ್ರ ಗಡಿ ಹೈವೇ ಬಂದ್ ಧಮ್ಕಿ

ಬೆಳಗಾವಿ

ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿರುವ ಹಿನ್ನಲೆಯಲ್ಲಿ ಎಂಇಎಸ್ ತನ್ನ ಪುಂಡಾಟ ನಡೆಸಲು ಸಿದ್ದತೆ ನಡೆಸಿದೆ.

ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕಿರಿಕ್ ಮಾಡಿದ್ರೆ, ಕರ್ನಾಟಕ ಸರ್ಕಾರಕ್ಕೆ ಶಿವಸೇನೆ ಪುಂಡರು ಧಮ್ಕಿ ಹಾಕಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಉದ್ಧವ ಠಾಕ್ರೆ ಬಣದ ಶಿವಸೇನೆ ಪುಂಡಾಟಿಕೆ ನಡೆಸಲು ಮುಂದಾಗಿದೆ. ಅಧಿವೇಶನ ಮೊದಲ ದಿನವೇ ಎಂಇಎಸ್ ನಿಂದ ಮಹಾಮೇಳಾವಕ್ಕೆ ಸಿದ್ಧತೆ ನಡೆಸಿದ್ದಾರೆ.

ಅತ್ತ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಹೈವೇ ಬಂದ್ ಮಾಡಲು ಉದ್ಧವ ಠಾಕ್ರೆ ಬಣದ ಶಿವಸೇನೆ ಮುಂದಾಗಿದೆ. ನಿನ್ನೆಯಷ್ಟೇ ಕೊಲ್ಲಾಪುರ ಡಿಸಿಗೆ ಶಿವಸೇನೆ ಪುಂಡರು ಮನವಿ ಕೊಟ್ಟಿದ್ದಾರೆ.

ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದೆ. ಆದ್ರೆ ಎಂಇಎಸ್ ಗೆ ಮಹಾಮೇಳಾವ್ ಗೆ ಕಳೆದ 3 ವರ್ಷದಿಂದ ಅನಮತಿ ಕೊಡ್ತಿಲ್ಲ. ಮಹಾರಾಷ್ಟ್ರದ ನಾಯಕರು ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ಬೆಳಗಾವಿ ಡಿಸಿ ನಿರ್ಬಂಧ ವಿಧಿಸುತ್ತಿದ್ದಾರೆ. ಈ ಬಾರಿ ಎಂಇಎಸ್ ಮಹಾಮೇಳಾವ್ ಗೆ ಮತ್ತು ಮಹಾರಾಷ್ಟ್ರ ನಾಯಕರು ಬೆಳಗಾವಿ ಪ್ರವೇಶಕ್ಕೆ ಅನುಮತಿ ಕೊಡುವಂತೆ ಸೂಚಿಸಬೇಕು ಎಂದು ಕೇಳಿದ್ದಾರೆ.

ಈ ಬಾರಿಯೂ ಎಂಇಎಸ್ ನ ಮಹಾಮೇಳಾವ್ ಗೆ ಅನುಮತಿ ಕೊಡದಿದ್ದರೆ, ಕರ್ನಾಟಕದ ಸಚಿವರು, ಶಾಸಕರು ಮಹಾರಾಷ್ಟ್ರ, ಕೊಲ್ಲಾಪುರ ಬರ್ತಾರೆ. ಮಹಾರಾಷ್ಟ್ರ ಸರ್ಕಾರ ಅವರನ್ನ ನಿರ್ಬಂಧಿಸುವುದಿಲ್ಲ. ಆದ್ರೆ ನಾವು ಕೊಲ್ಲಾಪುರ ಮಹಾಲಕ್ಷ್ಮೀ ದರ್ಶನಕ್ಕೆ ಬಂದ್ರೆ ನಾವು ಅಡ್ಡಿ ಪಡಿಸುತ್ತೇವೆ. ಡಿಸೆಂಬರ್ 9 ರಂದು ಎರಡು ರಾಜ್ಯಗಳ ಮಧ್ಯದ ರಸ್ತೆ ಬಂದ್ ಮಾಡ್ತಿವಿ ಎಂದು ಉದ್ಧವ ಠಾಕ್ರೆ ಬಣದ ಶಿವಸೇನೆ ಪುಂಡರು ಧಮಕಿ ಹಾಕಿದ್ದಾರೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಉತ್ತರ ಕರ್ನಾಟಕ

ಫೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ನಾಭಿರಾಜ್ ಸಾವು: ಸಾವಿನಲ್ಲೂ ಸಾರ್ಥಕತೆ ಮೆರೆದ ಎಎಸ್ಐ…

  • September 16, 2024
ಹುಬ್ಬಳ್ಳಿ ಫೈ ಓವರ್‌ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎ ಎಸ್ ಐ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್
Translate »