ಬೆಳಗಾವಿ
ಮೂರು ತಿಂಗಳಿಂದ ವೇತನ ನೀಡದಿದ್ದಕ್ಕೆ ಕಾರ್ಮಿಕ ಬ್ಯಾನರ್ ಕಂಬ ಏರಿ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬೈಲಹೊಂಗಲದ ಸಂಗಮ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ ಬಸಪ್ಪ ಮಡೊಳ್ಳಿ (48) ಆತ್ಮಹತ್ಯೆಗೆ ಯತ್ನಿಸಿದ ಕಾರ್ಮಿಕ.
ಮಾಲೀಕ ಚಂದ್ರಶೇಖರ ಶೆಟ್ಟಿ ಎಂಬಾತನಿಂದ ಸಂಬಳ ಕೇಳಿದ್ದಕ್ಕೆ ಕಾರ್ಮಿಕನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆತ ಅರೋಪಿಸಿದ್ದಾನೆ. ಹಲ್ಲೆ ಮಾಡಿ ಅವಾಚ್ಯವಾಗಿ ಹೊಟೇಲ್ ಮಾಲೀಕ ನಿಂದಿಸಿದ್ದಾರೆ ಎಂದು ದೂರಿದ್ದಾನೆ.
ಇದರಿಂದ ಮನನೊಂದು ಹೊಟೇಲ್ ಎದುರಿನ ಬ್ಯಾನರ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆಟೋ ಚಾಲಕ ಕಂಬ ಏರಿ ಕಾರ್ಮಿಕನ ಜೀವ ಕಾಪಾಡಿದ್ದಾನೆ.
ಕಾರ್ಮಿಕನನ್ನ ಕಾಪಾಡಿ ಸ್ಥಳೀಯ ಆಟೋ ಚಾಲಕರು ಪೊಲೀಸರ ಕೈಗೆ ಒಪ್ಪಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
