Karunadu Studio

ಉತ್ತರ ಕರ್ನಾಟಕ ಕರ್ನಾಟಕ ಬೆಳಗಾವಿ ರಾಜ್ಯ ಸುದ್ದಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ; ಖಾನಾಪುರ ಠಾಣೆ ಸಿಪಿಐ ಅಮಾನತ್ತು

ಬೆಳಗಾವಿ

ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರಕ್ಕೆ ಮುಂದಾದಂತಾಗಿದೆ.  

ಖಾನಾಪುರ ಠಾಣೆ ಸಿಪಿಐ ಮಂಜುನಾಥ ನಾಯಕ ಅವರನ್ನ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.  

ಸಿ.ಟಿ. ರವಿ ಅವರ ಬಂಧನ ಬಳಿಕ ಖಾನಾಪುರ ಪೊಲೀಸ್ ಠಾಣೆಗೆ‌ ಅವರನ್ನು ಕರೆದುಕೊಂಡು ಪೊಲೀಸ್ ಆಯುಕ್ತರು ಹೋಗಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನ ಠಾಣೆ ಒಳಗೆ ಬಿಟ್ಟು ಸಭೆ ಮಾಡಿದ್ದಕ್ಕೆ ಅವಕಾಶ ನೀಡಿದ್ದಕ್ಕಾಗಿ, ಮತ್ತು ಠಾಣೆಯ ಸುತ್ತ  ಕರ್ತವ್ಯ ಲೋಪದಡಿ ಖಾನಾಪುರ ಠಾಣೆ ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಐಜಿಪಿ ವಿಕಾಸ ಕುಮಾರ ಆದೇಶ ಹೊರಡಿಸಿದ್ದಾರೆ.

ಸಿ.ಟಿ. ರವಿ ಅವರ ಭೇಟಿಗೆ ಬಿಜೆಪಿ ನಾಯಕರಿಗೆ ಅವಕಾಶ ಕೊಟ್ಟಿದ್ದಕ್ಕೆ ಐಜಿಪಿ ಅವರು ಅಮಾನತು ಮಾಡಿದ್ರಾ ಎಂದು ಅನುಮಾನಗಳು ಎಳುತ್ತಿವೆ.

ಆಗ ಖಾನಾಪುರ ಪೊಲೀಸ್‌ ಠಾಣೆಯಲ್ಲೇ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ ಜಗದೀಶ ಕೂಡ ಇದ್ರೂ. ಹಿರಿಯ ಅಧಿಕಾರಿಗಳು ಇದ್ದಾಗಿಯೂ ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಿದ ಐಜಿಪಿ ವಿಕಾಸ ಕುಮಾರ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಕಮಿಷನರ್ ಅನುಮತಿ ಮೇರೆಗೆ ಬಿಜೆಪಿ ನಾಯಕರನ್ನ ಠಾಣೆ ಒಳಗೆ ಬಿಟ್ಟಿದ್ದಾಗಿ ಸಿಪಿಐ ಮಂಜುನಾಥ ನಾಯಕ ಹೇಳಿದ್ದಾರೆ ಎನ್ನಲಾಗಿದೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »