ಹುಬ್ಬಳ್ಳಿ
ಉಣಕಲ್ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಾಲಾಧಾರಿಗಳು ಚಿಕೆತ್ಸೆ ಫಲಿಸದೇ ರವಿವಾರ ಬೆಳಿಗ್ಗೆ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 6 ಕ್ಕೆ ಏರಿದೆ.
ರವಿವಾರ ಬೆಳಿಗ್ಗೆ ಧಾರವಾಡ ತಾಲೂಕಿನ ಸತ್ತೂರ ಗ್ರಾಮದ ಶಂಕರ ಚವ್ಹಾಣ ಉರ್ಫ್ ಊರ್ಬಿ ಎಂಬ 29 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಳೆದ 13 ವರ್ಷದಿಂದ ಕಿಮ್ಸನಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕರ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿದ್ದ.
ಇವರ ಜೋತೆಗೆ ಮಂಜುನಾಥ ವಾಗ್ಮೋಡೆ (22 ವರ್ಷ) ಮರಣ ಹೊಂದಿದ್ದು, ಸುಮಾರು 70% ಸುಟ್ಟ ಗಾಯಗಳಿಂದ ಮಂಜುನಾಥ ನರಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವಾಗಿದೆ.
ಘಟನೆಯಲ್ಲಿ ಈಗಾಗಲೇ ನಿಜಲಿಂಗಪ್ಪ ಬೇಪುರಿ ( 58 ವರ್ಷ), ಸಂಜಯ ಸವದತ್ತಿ ( 20 ವರ್ಷ), ರಾಜು ಮೂಗೇರಿ (21 ವರ್ಷ), ಲಿಂಗರಾಜು ಬೀರನೂರ (24 ವರ್ಷ) ಸಾವಿಗೀಡಾಗಿದ್ದರು.
ಘಟನೆಯಲ್ಲಿ ಗಾಯಗೊಂಡಿರುವ ಪ್ರಕಾಶ ಬಾರಕೇರ ( 42 ವರ್ಷ) ಹಾಗೂ ತೇಜಸ್ವರ್ ಸಾತರೆ ( 26 ವಯಸ್ಸ) ಚಿಂತಾಜನಕ ಸ್ಥಿತಿಯಲ್ಲಿದ್ದು, ವಿನಾಯಕ ಬಾರಕೇರ ( 12 ವರ್ಷ) ಬದುಕುಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಹುಬ್ಬಳ್ಳಿ ನಗರದಲ್ಲಿ ವರ್ಷದ ಕೊನೆಯಲ್ಲಿ ನಡೆದ ಬಹುದೊಡ್ಡ ದುರಂತ ಇದಾಗಿದೆ.
