Karunadu Studio

ಅಪಘಾತ ಉತ್ತರ ಕರ್ನಾಟಕ ಕರ್ನಾಟಕ ಧಾರವಾಡ ರಾಜ್ಯ ಸುದ್ದಿ

ಗಂಭೀರ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿ ಸಾವು ; ಸಾವಿನ ಸಂಖ್ಯೆ 6ಕ್ಕೆ

ಹುಬ್ಬಳ್ಳಿ

ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಾಲಾಧಾರಿಗಳು ಚಿಕೆತ್ಸೆ ಫಲಿಸದೇ ರವಿವಾರ ಬೆಳಿಗ್ಗೆ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 6 ಕ್ಕೆ ಏರಿದೆ.

ರವಿವಾರ ಬೆಳಿಗ್ಗೆ ಧಾರವಾಡ ತಾಲೂಕಿನ ಸತ್ತೂರ ಗ್ರಾಮದ ಶಂಕರ ಚವ್ಹಾಣ ಉರ್ಫ್ ಊರ್ಬಿ ಎಂಬ 29 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಳೆದ 13 ವರ್ಷದಿಂದ ಕಿಮ್ಸನಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕರ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿದ್ದ.

ಇವರ ಜೋತೆಗೆ ಮಂಜುನಾಥ ವಾಗ್ಮೋಡೆ (22 ವರ್ಷ) ಮರಣ ಹೊಂದಿದ್ದು, ಸುಮಾರು 70% ಸುಟ್ಟ ಗಾಯಗಳಿಂದ ಮಂಜುನಾಥ ನರಳುತ್ತಿದ್ದರು. ಚಿಕಿತ್ಸೆ‌ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವಾಗಿದೆ.

ಘಟನೆಯಲ್ಲಿ ಈಗಾಗಲೇ ನಿಜಲಿಂಗಪ್ಪ ಬೇಪುರಿ ( 58 ವರ್ಷ), ಸಂಜಯ ಸವದತ್ತಿ ( 20 ವರ್ಷ), ರಾಜು ಮೂಗೇರಿ (21 ವರ್ಷ), ಲಿಂಗರಾಜು ಬೀರನೂರ (24 ವರ್ಷ) ಸಾವಿಗೀಡಾಗಿದ್ದರು.

ಘಟನೆಯಲ್ಲಿ ಗಾಯಗೊಂಡಿರುವ ಪ್ರಕಾಶ ಬಾರಕೇರ ( 42 ವರ್ಷ) ಹಾಗೂ ತೇಜಸ್ವರ್ ಸಾತರೆ ( 26 ವಯಸ್ಸ) ಚಿಂತಾಜನಕ ಸ್ಥಿತಿಯಲ್ಲಿದ್ದು, ವಿನಾಯಕ ಬಾರಕೇರ ( 12 ವರ್ಷ) ಬದುಕುಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಹುಬ್ಬಳ್ಳಿ ನಗರದಲ್ಲಿ ವರ್ಷದ ಕೊನೆಯಲ್ಲಿ ನಡೆದ ಬಹುದೊಡ್ಡ ದುರಂತ ಇದಾಗಿದೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »