Karunadu Studio

ಅಪಘಾತ ಉತ್ತರ ಕರ್ನಾಟಕ ವಿಜಯಪುರ ಸುದ್ದಿ

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರ

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ ಹಾಗೂ ಇಬ್ಬರು ಮಕ್ಕಳ ಸಾವನ್ನಪ್ಪಿದ ಘಟನೆ ನಡೆದಿದೆ.‌

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಗಂಡು ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದ ತಾಯಿ ಮಕ್ಕಳು ದುರ್ಮರಣಕ್ಕಿಡಾಗಿದ್ದಾರೆ.

ಗೀತಾ ಬಡಗಿ (28) ಇಬ್ಬರು ಗಂಡು ಮಕ್ಕಳಾದ ಶ್ರವಣ (6) ಶರಣ (4) ಮೃತ ದುರ್ದೈವಿಗಳು. ಮೃತ ಗೀತಾಳನ್ನ ಯಾಳವಾರ ಗ್ರಾಮದ ಶ್ರೀಶೈಲ ಎಂಬುವವರ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು.

ಗೀತಾ ತಂದೆ ರಾಮಪ್ಪ ನಾಯ್ಕೋಡಿ ಎಂಬುವರ ಜಮೀನಿನಲ್ಲಿ ಕೃಷಿ ಹೊಂಡವಿದ್ದು, ಮಕ್ಕಳ ಕರೆದುಕೊಂಡು ಕೃಷಿ ಹೊಂಡದ ಬಳಿ ಹೋದಾಗ ಕಾಲು ಜಾರಿ ಮಕ್ಕಳ ಸಮೇತ ಹೊಂಡಕ್ಕೆ ಬಿದ್ದಿದ್ದಾಳೆ ಎನ್ನಲಾಗಿದೆ.

ಇನ್ನು ಗಂಡನ ಜೊತೆಗೆ ಜಗಳವಾಡಿ ತವರಿಗೆ ಬಂದಿದ್ದ ವೇಳೆ ದುರ್ಘಟನೆ ನಡೆದಿದ್ದು, ಸಾವಿನ ಬಗ್ಗೆ ಸಂಶಯ ಮೂಡಿವೆ. ಇನ್ನು ಸ್ಥಳೀಯರು ಮೂವರ ಶವಗಳನ್ನು ಹೊರ ತೆಗೆದಿದ್ದು, ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಉತ್ತರ ಕರ್ನಾಟಕ

ಫೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ನಾಭಿರಾಜ್ ಸಾವು: ಸಾವಿನಲ್ಲೂ ಸಾರ್ಥಕತೆ ಮೆರೆದ ಎಎಸ್ಐ…

  • September 16, 2024
ಹುಬ್ಬಳ್ಳಿ ಫೈ ಓವರ್‌ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎ ಎಸ್ ಐ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್
Translate »