Karunadu Studio

ಉತ್ತರ ಕರ್ನಾಟಕ ಕರ್ನಾಟಕ ಧಾರವಾಡ ರಾಜ್ಯ ಸುದ್ದಿ

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ; ಬಿಜೆಪಿ ಮುಖಂಡ, ಮಾಜಿ ಮೇಯರ್ ಸ್ವಾಗತ

ಧಾರವಾಡ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿದ ಸರಕಾರದ ನಿರ್ಧಾರವನ್ನು ಮಾಜಿಮಹಾಪೌರರು ಈರೇಶ ಅಂಚಟಗೇರಿ ಸ್ವಾಗತಿಸಿದ್ದಾರೆ.

ಆದರೆ ಕ್ಷೇತ್ರ ವಿಂಗಡನೆ 1ನೆ ವಾರ್ಡಿನಿಂದ 26ನೆ ವಾರ್ಡಿಗೆ ಮಾತ್ರ ಸೀಮಿತಗೊಳಿಸದೆ, ಭೌಗೋಳಿಕವಾಗಿ ಧಾರವಾಡದ ಸಮಗ್ರ ಅಭಿವೃದ್ಧಿಗಾಗಿ ಬೇಲೂರು ವಸಾಹತು ಪ್ರದೇಶ, ಹೈಕೋರ್ಟ್ ಭಾಗದಿಂದ ನವನಗರದವರೆಗೆ, ಮಹಾನಗರ ಪಾಲಿಕೆಯಾಗಿ ರಚಿಸಿದರೆ ಸರಕಾರದ ಸೂಕ್ತ ನಿರ್ಣಯವಾಗಿರುತ್ತದೆ. ಇದರಿಂದ ಧಾರವಾಡ ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ ಎಂದಿದ್ದಾರೆ.

ಕೇವಲ ಕೆಲವೇ ವಾರ್ಡಗಳಿಗೆ ಸೀಮಿತಗೊಳಿಸದೇ ಧಾರವಾಡದ ಬೆಳವಣಿಗೆಗೆ ಅನುಕೂಲಕರವಾಗುವ ದೃಷ್ಟಿಯಿಂದ, ಹುಬ್ಬಳ್ಳಿ ಧಾರವಾಡ ಸಮಾನಾಂತರ ದೃಷ್ಟಿಯಿಂದ ಕಾಣಲು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರವನ್ನು ಪ್ರತ್ಯೇಕಗೊಳಿಸಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕೆಂದು ಅದೇಶಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮಾಜಿಮಹಾಪೌರರು ಈರೇಶ ಅಂಚಟಗೇರಿ ಆಗ್ರಹಪಡಿಸಿದ್ದಾರೆ.

ಐಐಟಿ- ಐಐಐಟಿ, 3 ವಿಶ್ವವಿದ್ಯಾಲಯಗಳನ್ನು ಒಳಗೊಂಡಿರುವ ಧಾರವಾಡ ಶೈಕ್ಷಣಿಕ ನಗರದ ಜೋತೆ ಜೋತೆಗೆ, ಪ್ರತಿಷ್ಠಿತ ಸಾಂಸ್ಕೃತಿಕ ನಗರವಾದ ಧಾರವಾಡದ ಅಭಿವೃದ್ಧಿಗಾಗಿ ವಿಶೇಷ ಅನುದಾನ 2000 ಕೋಟಿ ಘೋಷಣೆ ಮಾಡಬೇಕೆಂದು ವಿನಂತಿ ಮಾಡುತ್ತೇನೆ ಎಂದು ಮಾಜಿಮಹಾಪೌರರು ಈರೇಶ ಅಂಚಟಗೇರಿ ಪ್ರಕಟಣೆ ಮೂಲಕ ಸರಕಾರಕ್ಕೆ ವಿನಂತಿಸಿದ್ದಾರೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »