Karunadu Studio

ಉತ್ತರ ಕರ್ನಾಟಕ ಕರ್ನಾಟಕ ಧಾರವಾಡ ಸುದ್ದಿ

ಗ್ಯಾಸ್ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ; ಸಿಎಂ ಆದೇಶ

ಹುಬ್ಬಳ್ಳಿ

ಹುಬ್ಬಳ್ಳಿಯ ಉಣಕಲ ಬಳಿಯ ಅಚ್ಚವ್ವನ ಕಾಲೋನಿಯಲ್ಲಿ ಕಳೆದ ವಾರ ಸಂಭವಿಸಿದ ಸಿಲಿಂಡರ್ ಸ್ಫೋಟ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾತಿಯಾಗದೇ ಅಸುನೀಗಿದ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳ ನೆರವಿಗೆ ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ ಅವರು ನಿಂತಿದ್ದಾರೆ.

ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಲಾಡ ಅವರು ಮೃತರ ಕುಟುಂಬಗಳ ಸಂಕಷ್ಟ ವಿವರಿಸಿ, ಸಾಧ್ಯವಾದಷ್ಟು ಹೆಚ್ಚಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಕೊಡಿವಂತೆ ಮನವಿ ಮಾಡಿದ್ದಾರೆ.

ಸಚಿವ ಸಂತೋಷ ಲಾಡ ಅವರ ಕಳಕಳಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತಪಟ್ಟ ಎಲ್ಲ ಅಯ್ಯಪ್ಪ ಮಾಲಾಧಾರಿಗಳ ನೊಂದ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದೆಂದು ಆದೇಶಿಸಿದ್ದಾರೆ.

ನೊಂದ ಕುಟುಂಬಗಳ‌ ಕಣ್ಣೀರು ಒರೆಸಲು ಸತತವಾಗಿ ಪ್ರಯತ್ನ ಪಡುತ್ತಿರುವ ಲಾಡ ಅವರು ಅಯ್ಯಪ್ಪ ಮಾಲಾಧಾರಿಗಳನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನಗಳನ್ನು ಮಾಡಿದ್ದರು. ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಸಹ ಲಾಡ ಅವರು ಕರೆಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಗೊಂಡಿದ್ದ 9 ಜನರ ಪೈಕಿ 8 ಜನ ಅಸುನೀಗಿದ್ದರು. ಇನ್ನೊಬ್ಬ ಬಾಲಕ ಮಾಲಾಧಾರಿ ಸದ್ಯ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಮೃತರ ಕುಟುಂಬಗಳ ಕಷ್ಟಕ್ಕೆ ಕರಗಿದ್ದ ಲಾಡ ಅವರು ಆರಂಭದಲ್ಲೇ ತಮ್ಮ ಸಂತೋಷ ಲಾಡ ಫೌಂಡೇಶನ್ ಮೂಲಕ ವೈಯುಕ್ತಿಕ ಧನ ಸಹಾಯ ಮಾಡಿದ್ದರು. ಈಗ ಸರ್ಕಾರದಿಂದ ಸಹ ಪರಿಹಾರ ಕೊಡಿಸಿದ್ದು, ನೊಂದ ಕುಟುಂಬಗಳ ಸಂಕಷ್ಟಕ್ಕೆ ಆಸರೆಯಾಗುತ್ತಿದ್ದಾರೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »