Karunadu Studio

ಉತ್ತರ ಕರ್ನಾಟಕ ಕರ್ನಾಟಕ ಧಾರವಾಡ ರಾಜ್ಯ ಸುದ್ದಿ

ಇದು ಧಾರವಾಡದ ಸಮಗ್ರ ಅಭಿವೃದ್ಧಿಗೆ ನಾಂದಿ; ವಿನಯ ಕುಲಕರ್ಣಿ

ಧಾರವಾಡ

ಸಮಗ್ರ ಅಭಿವೃದ್ಧಿಗಾಗಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಅನುಮತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧಾರವಾಡದ ಜನತೆ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕೆಂದು ಅನೇಕ ಹಿರಿಯರು ಬಹಳ ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರ ಹೋರಾಟದ ಫಲವಾಗಿ ಇಂದು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷನೆ ಆಗಿದೆ. ಇದಕ್ಕಾಗಿ ಧಾರವಾಡ ಜಿಲ್ಲೆಯ ಎಲ್ಲ ಶಾಸಕರು, ಪಾಲಿಕೆ ಸದಸ್ಯರು ಸಹಕಾರವನ್ನ ನೀಡಿದ್ದಾರೆ.

ಇದು ಧಾರವಾಡದ ಸಮಗ್ರ ಅಭಿವೃದ್ದಿಗೆ ನಾಂದಿ ಆಗಲಿದೆ. ಪ್ರತ್ಯೇಕ ಮಹಾನಗರ ಪಾಲಿಕೆಯ ಸ್ಥಾಪನೆಯಿಂದ ಧಾರವಾಡದ ಪ್ರಾದೇಶಿಕ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲು ಸಾಧ್ಯವಾಗುತ್ತದೆ. ಸ್ಥಳೀಯ ಸೌಕರ್ಯಗಳು, ಮೂಲಸೌಕರ್ಯ ಯೋಜನೆಗಳು, ಮತ್ತು ನಾಗರಿಕರಿಗೆ ಅಗತ್ಯವಾದ ಸೇವೆಗಳನ್ನು ಸಮರ್ಪಕವಾಗಿ ಪ್ರತ್ಯಕ್ಷಗೊಳಿಸುವಲ್ಲಿ ಇದು ಮಹತ್ವದ ಪಾತ್ರವನ್ನು ವಹಿಸಲಿದೆ.

ಈ ಮಹತ್ವದ ನಿರ್ಣಯದ ಮೂಲಕ, ಧಾರವಾಡವು ತನ್ನ ಸ್ವತಂತ್ರ ಪಥವನ್ನು ಹೊಂದಿ, ಸಮಗ್ರ ಬೆಳವಣಿಗೆಯ ಗುರಿಯನ್ನು ಸಾಧಿಸಲು ಹೊಸ ಹಾದಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »