Karunadu Studio

ಉತ್ತರ ಕರ್ನಾಟಕ ಕರ್ನಾಟಕ ಬೆಳಗಾವಿ ರಾಜ್ಯ ಸುದ್ದಿ

ರೋಗಿಗಳಿಗೆ ಉತ್ತಮ ಸೇವೆ ಸಿಗಲಿ; ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಳಗಾವಿ

ಕ್ಯಾನ್ಸರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಸೇವೆ ಸಿಗಲಿ. ಅತ್ಯುನ್ನತ ಕ್ಯಾನ್ಸರ್ ಚಿಕಿತ್ಸೆ ರೋಗಿಗಳಿಗೆ ಸಿಗಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆ ಕ್ಯಾನ್ಸರ್ ಆಸ್ಪತ್ರೆಯ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಜಗತ್ತಿನಲ್ಲಿ 20 ಮಿಲಿಯನ್ ಕ್ಯಾನ್ಸರ್ ಕೇಸ್ ಪತ್ತೆ ಆಗ್ತಿವೆ, 9 ಮಿಲಿಯನ್ ಸಾವು ಆಗ್ತಿವೆ. ಕ್ಯಾನ್ಸರ್ ರೋಗಿ ಜೊತೆಗೆ ಆತನ ಕುಟುಂಬಕ್ಕೂ ಸಂಕಷ್ಟ ತರುತ್ತದೆ. ಪ್ರತಿಯೊಬ್ಬ ವೈದ್ಯರು ಕ್ಯಾನ್ಸರ್ ರೋಗಿಗಳ ಬಗ್ಗೆ ವಿಶೇಷ ಕಾಳಜಿಯಿಂದ ಚಿಕಿತ್ಸೆ ಕೊಡಬೇಕು. ಭಾರತ ಸರ್ಕಾರ ಆರೋಗ್ಯ ಸೇವೆ ಗುಣಮಟ್ಟ ಗೊಳಿಸಲು ಕ್ರಮವಹಿಸಿದೆ ಎಂದು ಹೇಳಿದರು.

ಭಾರತ ಸರ್ಕಾರದ ಅನೇಕ ಆರೋಗ್ಯ ಸೇವೆಗಳನ್ನ ಜಾರಿಗೊಳಿಸಿದೆ. ಆಯುಷ್ಯ ಮಾನ್ ಭಾರತ ಅಂತಾ ಯೋಜನೆಗಳು ಜನಮುಖಿ ಆಗಿವೆ. ಸಮಾಜದಲ್ಲಿ ಕ್ಯಾನ್ಸರ್ ರೋಗ ತಡೆಯಲು ಜಾಗೃತಿ ಮೂಡಿಸಬೇಕಿದೆ. ಇಂತಹ ಮಾರಕ ರೋಗ ತಡೆಯಲು ಕುಟುಂಬದ ಸದಸ್ಯರು, ಸಮಾಜ ಪ್ರಮುಖ ಪಾತ್ರ ನಿರ್ಮಿಸಬೇಕಿದೆ ಎಂದರು.

ಮಾರಕ ರೋಗಗಳನ್ನ ಆರಂಭದಲ್ಲಿ ಪತ್ತೆ ಮಾಡಿ, ಚಿಕಿತ್ಸೆ ಕೊಡಿಸುವ ಅಗತ್ಯವಿದೆ. ನನಗೆ ಕೆಎಲ್ಇ ಸಂಸ್ಥೆ ಸೇವೆ ಸಂತೋಷ ತಂದಿದೆ. ನಿಮ್ಮಲ್ಲರಿಗೂ ನಾನು ಶುಭಾಶಯ ತಿಳಿಸುವೆ, ನಿಮ್ಮಲ್ಲರ ಭವಿಷ್ಯ ಉಜ್ವಲ ಆಗಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »