Karunadu Studio

ಕರ್ನಾಟಕ ಬೆಂಗಳೂರು ರಾಜಕೀಯ ರಾಜ್ಯ ಸುದ್ದಿ

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ಪ್ರಥಮ ಸಭೆ

ಬೆಂಗಳೂರು

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು.

ಮಂಡಳಿಯ ಮೂಲಕ ನೀಡಲಾಗುವ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಚಿವರು ಚರ್ಚಿಸಿದರು.

ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರ ಹಿತ ಕಾಪಾಡುವ ಉದ್ದೇಶದಿಂದ ಈ ಮಂಡಳಿಯನ್ನು ರಚಿಸಲಾಗಿದ್ದು, ಹಲವಾರು ಸಾಮಾಜಿಕ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಸಭೆಯಲ್ಲಿ ಹಾಜರಿದ್ದ ಹಲವರು ಮಂಡಳಿಯ ಸಮರ್ಪಕ ಕಾರ್ಯವಿಧಾನಕ್ಕೆ ಸಲಹೆಗಳನ್ನು ನೀಡಿದರು.

ಈ ಸಭೆಯಲ್ಲಿ ಕಾರ್ಮಿಕ ಮತ್ತು ಸಾರಿಗೆ ಕಾರ್ಯದರ್ಶಿಗಳಾದ ಎನ್.ವಿ. ಪ್ರಸಾದ, ಕಾರ್ಮಿಕ ಇಲಾಖೆಯ ಆಯುಕ್ತ ಡಾ. ಗೋಪಾಲಕೃಷ್ಣ, ಸಾರಿಗೆ ಆಯುಕ್ತ ಯೋಗೀಶ, ಅಪರ ಸಾರಿಗೆ ಆಯುಕ್ತ ಉಮಾಶಂಕರ, ಉಪ ಸಾರಿಗೆ ಆಯುಕ್ತ ಮೂರ್ತಿ, ವಾಣಿಜ್ಯ ತೆರಿಗೆ ಆಯುಕ್ತ ವಿಪುಲ ಬನ್ಸಲ, ಜಂಟಿ ಕಾರ್ಮಿಕ ಆಯುಕ್ತ ಚಿದಾನಂದ, ಉಪ ಕಾರ್ಮಿಕ ಆಯುಕ್ತ ರವಿಕುಮಾರ, ನೂತನ ಮಂಡಳಿಯ ಸದಸ್ಯರುಗಳಾದ ಕೆ.ಆರ್. ಧನಂಜಯ, ಸತ್ಯನಾರಾಯಣ, ರೋಹಿತ, ಲಕ್ಷ್ಮಣ ಕುಮಾರ ಮತ್ತಿತರರು ಪಾಲ್ಗೊಂಡಿದ್ದರು.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »