Karunadu Studio

ಕರ್ನಾಟಕ

Under-19 Women’s World Cup: ಇಂಗ್ಲೆಂಡ್‌ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ! – Kannada News | India Reached Under-19 Women’s World Cup Final After Beating England In Semifinal


ಕೌಲಾಲಂಪುರ: ಮಹಿಳೆಯರ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್ ತಲುಪಿದೆ. ಈ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಸುಲಭವಾಗಿ ಸೋಲಿಸಿತು. ಇದರೊಂದಿಗೆ ಕಳೆದ ಚಾಂಪಿಯನ್ ಭಾರತ ತಂಡ ಸತತ ಎರಡನೇ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ತಂಡ ಈಗ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್‌ ಆರಿಸಿಕೊಂಡಿತ್ತು. ಆದರೆ ಇಂಗ್ಲೆಂಡ್‌ ತಂಡದ ಈ ನಿರ್ಧಾರವನ್ನು ಭಾರತದ ಬೌಲರ್‌ಗಳು ತಲೆ ಕೆಳಗಾಗುವಂತೆ ಮಾಡಿದರು. ಇಂಗ್ಲೆಂಡ್ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 8 ವಿಕೆಟ್ ಕಳೆದುಕೊಂಡು 113 ರನ್ ಗಳಿಸಿತ್ತು. ಭಾರತ ತಂಡದ ಪರ ವೈಷ್ಣವಿ ಶರ್ಮಾ ಮತ್ತು ಪರುಣಿಕಾ ಸಿಸೋಡಿಯಾ ತಲಾ ಮೂರು ವಿಕೆಟ್ ಪಡೆದರು. ಇವರ ಜೊತೆಗೆ ಆಯುಷಿ ಶುಕ್ಲಾ ಎರಡು ವಿಕೆಟ್ ಪಡೆದರು. ಡೇವಿನಾ ಪೆರಿನ್ ಇಂಗ್ಲೆಂಡ್ ಪರ ವೈಯಕ್ತಿಕ ಗರಿಷ್ಠ 45 ರನ್ ಗಳಿಸಿದರು.

Ranji Trophy: ವಿರಾಟ್‌ ಕೊಹ್ಲಿಯನ್ನು ಕ್ಲೀನ್‌ ಬೌಲ್ಡ್‌ ಮಾಡಿದ ಹಿಮಾಂಶು ಸಂಗ್ವಾನ್‌ ಯಾರು?

ಇಂಗ್ಲೆಂಡ್ ನೀಡಿದ್ದ 114 ರನ್ ಗಳ ಗುರಿಯನ್ನು ಟೀಂ ಇಂಡಿಯಾ 15 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಚೇಸ್ ಮಾಡಿತು. ಈ ಪಂದ್ಯದಲ್ಲಿ ಜಿ ಕಾಮಿನಿ ಭಾರತದ ಪರ 56 ರನ್‌ಗಳ ಅಮೋಘ ಇನಿಂಗ್ಸ್‌ ಆಡಿದ್ದರು. ಆದರೆ, ಸಾನಿಕಾ 11 ರನ್ ಗಳಿಸಿ ಅಜೇಯರಾಗಿ ಉಳಿದರು. ಇದಲ್ಲದೇ ಜಿ ತ್ರಿಶಾ 29 ಎಸೆತಗಳಲ್ಲಿ 35 ರನ್‌ಗಳ ಇನಿಂಗ್ಸ್‌ ಆಡಿದರು. ಇದೀಗ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಪಂದ್ಯವನ್ನಾಡಲಿದೆ. ಈ ಪಂದ್ಯ ಫೆಬ್ರವರಿ 2 ರಂದು ನಡೆಯಲಿದೆ.

ಒಂದೇ ಒಂದು ಪಂದ್ಯವನ್ನೂ ಸೋಲದ ಭಾರತ

ಪ್ರಸಕ್ತ ವರ್ಷದ ಅಂಡರ್ 19 ಟಿ20 ವಿಶ್ವದಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನೂ ಸೋತಿಲ್ಲ. ಮೊದಲ ಗುಂಪು ಹಂತದ ಪಂದ್ಯಗಳಲ್ಲಿ ಭಾರತ, ವೆಸ್ಟ್ ಇಂಡೀಸ್, ಮಲೇಷ್ಯಾ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳನ್ನು ಸೋಲಿಸಿತು. ಇದಾದ ಬಳಿಕ ಭಾರತ ತಂಡ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧವೂ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »