Karunadu Studio

ಕರ್ನಾಟಕ

Union Budget 2025: ಇಂದು ಎಲ್ಲರೂ ಆರ್ಥಿಕ ತಜ್ಞರೇ..! ಇಲ್ಲಿದೆ ಕೇಂದ್ರ ಬಜೆಟ್ ಗೆ ಸಂಬಂಧಿತ ಬೆಸ್ಟ್ ಮೀಮ್ಸ್! – Kannada News | Budget 2025 memes: 5 excellent posts that sum up middle class expectations and more


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೂರನೇ ಅವಧಿಯ ಸರಕಾರದ ಮೊದಲ ಬಜೆಟ್ (Union Budget) ಇಂದು (ಫೆ.01)ರಂದು ಮಂಡನೆಯಾಗಲಿದೆ. ಈ ಬಜೆಟ್ ಬಗ್ಗೆ ಈಗಾಗಲೇ ಜನರ ನಿರೀಕ್ಷೆಗಳು ಹೆಚ್ಚಾಗಿದ್ದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಮ್ಮ ಸತತ 8ನೇ ಬಜೆಟ್ ನಲ್ಲಿ ಏನೆಲ್ಲಾ ಹೊಸ ಘೊಷಣೆಗಳನ್ನು ಮಾಡಲಿದ್ದಾರೆಂದು ಜನ ಸಾಮಾನ್ಯರು ಹಾಗೂ ಉದ್ಯಮ ವಲಯ ಕಾತರದಿಂದಿದೆ.

ಮಧ್ಯಮ ವರ್ಗದವರು ತೆರಿಗೆ ವಿನಾಯಿತಿಯನ್ನು ಎದುರು ನೋಡುತ್ತಿದ್ದರೆ, ಉದ್ಯಮ ವಲಯ ಜಿ.ಎಸ್.ಟಿ. ಸ್ವರೂಪದಲ್ಲಿ ಸರಳತೆಯನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜ.31ರ ಶುಕ್ರವಾರದಂದು ಸಂಪತ್ತಿನ ಅಧಿದೇವತೆಯಾಗಿರುವ ಲಕ್ಷ್ಮಿಯನ್ನು ಪ್ರಾರ್ಥಿಸಿದ್ದು, ದೇಶದ ಬಡ ಮತ್ತು ಮಧ್ಯಮ ವರ್ಗದ ಜನತೆಯನ್ನು ಹರಸುವಂತೆ ಅವರು ಪ್ರಾರ್ಥಿಸಿಕೊಂಡಿದ್ದಾರೆ. ‘ಈ ದೇಶದ ಬಡ ಮತ್ತು ಮಧ್ಯಮ ವರ್ಗದ ಜನರನ್ನು ಹರಸುವಂತೆ ನಾನು ಆ ಲಕ್ಷ್ಮೀ ದೇವರನ್ನು ಪ್ರಾರ್ಥಿಸುತ್ತಿದ್ದೇನೆ’ ಎಂದು ಪ್ರಧಾನಿ ಮೋದಿ ಅವರು ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಪ್ರಧಾನಿ ಅವರ ಈ ಮಾತುಗಳು ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ತೆರಿಗೆ ನೆಮ್ಮದಿ ಸಿಗಬಹುದೆಂಬ ಆಶಾವಾದ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್ ಮತ್ತು ಜೋಕ್ಸ್ ಗಳು ಹರಿದಾಡುತ್ತಿವೆ. ಇಂತಹ ಮೀಮ್ಸ್ ಮತ್ತು ಜೋಕ್ಸ್ ಗಳಲ್ಲಿ ಬೆಸ್ಟ್ ಐದನ್ನು ನಿಮಗಾಗಿ ನಾವಿಲ್ಲಿ ನಿಡುತ್ತಿದ್ದೇವೆ.

ಇದನ್ನೂ ಓದಿ: Union Budget: ಬಜೆಟ್‌ ಎಷ್ಟು ಗೌಪ್ಯವಾಗಿರುತ್ತೆ? ಬಜೆಟ್‌ನ ಮುದ್ರಿತ ಪ್ರತಿ ಯಾರಿಗೆಲ್ಲ ತಲುಪಿರುತ್ತೆ? ಇಲ್ಲಿದೆ ಸಂಪೂರ್ಣ ವಿವರ

ಈ ಬಾರಿಯ ಕೇಂದ್ರ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಫೆ.1ರ ಶನಿವಾರದಂದು ಮಂಡಿಸಲಿದ್ದಾರೆ.ಬ್ಲೂಮ್ ಬರ್ಗ್ ಪ್ರಕಾರ ನಿರ್ಮಲಾ ಅವರು ವೈಯಕ್ತಿಕ ಆದಾಯ ತೆರಿಗೆಯನ್ನು ಕಡಿತಗೊಳಿಸಿ, ಗ್ರಾಮೀಣ ಪ್ರದೇಶಗಳ ಕಲ್ಯಾಣ ಯೋಜನೆಗಳನ್ನು ಘೋಷಿಸುವ ಸಾಧ್ಯತೆಗಳಿವೆ. ಇದರಿಂದಾಗಿ ಕುಸಿಯತ್ತಿರುವ ವೇತನ ಮತ್ತು ಬೆಲೆ ಏರಿಕೆಯಿಂದ ಮಧ್ಯಮ ವರ್ಗಕ್ಕೆ ಕೊಂಚ ನಿರಾಳತೆ ಸಿಗುವ ಸಾಧ್ಯತೆಗಳಿವೆ.

ಗುರುವಾರದಂದು ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಸಂಸತ್ತಿನ ಎರಡೂ ಸದನಗಳನ್ನುದ್ದೇಶಿಸಿ ಭಾಷಣ ಮಾಡಿದ್ದರು. ಈ ಮೂಲಕ ಈ ವರ್ಷದ ಬಜೆಟ್ ಅಧಿವೇಶನಕ್ಕೆ ಅಧಿಕೃತ ಚಾಲನೆ ದೊರಕಿತ್ತು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »