Karunadu Studio

ಕರ್ನಾಟಕ

ಭೂಗತನಾಗಿದ್ದ ನಕ್ಸಲ್‌ ಕೋಟೆಹೊಂಡ ರವಿ ಶರಣಾಗತಿ…..!


ಬೆಂಗಳೂರು:

   ಕರ್ನಾಟಕದ ನಕ್ಸಲ್‌ ನಾಯಕ ವಿಕ್ರಂ ಗೌಡ ಹತನಾದ ನಂತರ ಮಹಿಳೆಯರು ಸೇರಿದಂತೆ 6 ನಕ್ಸಲೈಟ್‌ಗಳು ಸರ್ಕಾರದ ಎದುರು ಶರಣಾಗಿದ್ದರು. ರಾಜ್ಯದಲ್ಲಿ ಕೊನೆಯ ನಕ್ಸಲೈಟ್‌ ಆಗಿ ಉಳಿದಿದ್ದ ಕೋಟೆಹೊಂಡ ರವಿ ಇದೀಗ ಶರಣಾಗತಿಗೆ ಒಪ್ಪಿಗೆ ಸೂಚಿಸಿದ್ದಾನೆ ಎಂದು ತಿಳಿದು ಬಂದಿದೆ. ಈತ ಹಲವು ವರ್ಷಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇದೀಗ ಪುನರ್ವಸತಿ ಸಮಿತಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಮುಖಂಡರು ಮಾತುಕತೆ ನಡೆಸಿದ ನಂತರ ಕೋಟೆಹೊಂಡ ರವಿ ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಒಪ್ಪಿಕೊಂಡಿದ್ದಾನೆ. 

   ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಇಂದು ಬೆಳಗ್ಗೆ 11 ಗಂಟೆಗೆ ಚಿಕ್ಕಮಗಳೂರಿನ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶರಣಾಗಲಿದ್ದಾನೆ. ಕಳೆದ 18 ವರ್ಷಗಳಿಂದ ನಕ್ಸಲ್ ರವೀಂದ್ರ ಭೂಗತನಾಗಿದ್ದ. ಇಂದು ಎಸ್ ಪಿ ವಿಕ್ರಂ ಆಮ್ಟೆ, ಡಿಸಿ ವೀಣಾ ನಾಗರಾಜ್ ಮುಂದೆ ಶರಣಾಗಲಿದ್ದಾನೆ. ಈತನ ಶರಣಾಗತಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊನೆಯ ಭೂಗತ ನಕ್ಸಲ್ ಕೋಟೆಹೊಂಡ ರವಿ ನೆಮ್ಮಾರ್‌ ಫಾರೆಸ್ಟ್‌ ಐಬಿಯಲ್ಲಿ ಶರಣಾಗಿದ್ದಾನೆ ಎಂದು ತಿಳಿಸಿದ್ದಾರೆ.

  ಫಾರೆಸ್ಟ್‌ ಐಬಿಯಿಂದ ನಾವು ಆತನನ್ನು ಚಿಕ್ಕಮಗಳೂರಿಗೆ ಕರೆದುಕೊಂಡು ಹೋಗಲಿದ್ದೇವೆ. ಇದಿಷ್ಟೇ ಅಲ್ಲದೆ ಹಲವು ವರ್ಷಗಳಿಂದ ತಲೆ ಮರೆಸಿಕೊಂಡಿರುವ ತೊಂಬಿಟ್ಟು ಲಕ್ಷ್ಮೀ ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ಶರಣಾಗಲಿದ್ದಾಳೆ ಎಂದು ಅವರು ಹೇಳಿದ್ದಾರೆ. 

  ರಾಜ್ಯ ಸರ್ಕಾರ ನಡೆಸಿದ್ದ ಆಪರೇಷನ್ ನಕ್ಸಲ್ ಶರಣಾಗತಿ ಇದೀಗ ಪೂರ್ಣಗೊಂಡಿದೆ. ರಾಜ್ಯವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ನಿರಂತರವಾಗಿ ಶ್ರಮಿಸಿದ 22 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಪದಕವನ್ನು ಘೋಷಿಸಿದ್ದಾರೆ. ಗುಪ್ತಚರ ಇಲಾಖೆ ನಕ್ಸಲ್ ಶರಣಾಗತಿ ಮಾಹಿತಿ ನೀಡಿದ್ದು, ಕರ್ನಾಟಕವು ಸಂಪೂರ್ಣವಾಗಿ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂದು ಖಚಿತಪಡಿಸಿದೆ. 

   ಆರು ನಕ್ಸ್‌ಲೈಟ್‌ಗಳು ರಾಜ್ಯ ಸರ್ಕಾರದ ಎದುರು ಶರಣಗಾಗಿದ್ದರೂ ಕೋಟೆಹೊಂಡ ರವಿ ಮಾತ್ರ ಮುಖ್ಯವಾಹಿನಿಗೆ ಬಾರದೇ ಇದ್ದಿದ್ದು ಆತನ ಕುಟುಂಬಕ್ಕೆ ಬೇಸರ ಮೂಡಿಸಿತ್ತು.ರವೀಂದ್ರ ಶರಣಾದರೆ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಹಿಂದೆ ತಿಳಿಸಿದ್ದರು. ಇದೀಗ ಆತ ಮುಖ್ಯವಾಹಿನಿಗೆ ಬರಲು ಒಪ್ಪಿಗೆ ಸೂಚಿಸಿದ್ದಾನೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »