Karunadu Studio

ಕರ್ನಾಟಕ

KS Ramji: ಕಿರುತೆರೆ ನಿರ್ದೇಶನಕ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; ಅಪಪ್ರಚಾರ ಎಂದು ದೂರು ದಾಖಲಿಸಿದ ರಾಮ್‌ಜೀ – Kannada News | Allegation of sexual harassment against TV director; Ramjee filed a complaint for defamation


ಬೆಂಗಳೂರು: ಪುಟ್ಟಗೌರಿ ಮದುವೆ, ಗಿಣಿರಾಮದಂತಹ ಹಿಟ್‌ ಧಾರಾವಾಹಿಗಳನ್ನು ನೀಡಿದ್ದ ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್​ಜೀ (KS Ramji) ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿದ್ದವು. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇತ್ತೀಚೆಗೆ ಯುವನಟಿ ಒಬ್ಬರು ಯ್ಯುಟ್ಯೂಬ್‌ ಸಂದರ್ಶನದಲ್ಲಿ ರಾಮ್‌ಜೀ ಅವರ ಹೆಸರನ್ನು ಹೇಳದೆ ಲೈಗಿಂಕ ಕಿರುಕುಳದ ಆರೋಪ ಮಾಡಿದ್ದರು. ಸದ್ಯ ರಾಮ್‌ ಜೀ ವಿರುದ್ಧದ ಪೋಸ್ಟ್​ಗಳು ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್​ಪೋಸಿಂಗ್ ಕೆಎಸ್ ರಾಮ್​ಜೀ’ ಹೆಸರಿನ ಪೇಜ್ ತೆರೆದು ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ.

ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್‌ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್​ಗಳನ್ನು ಫೇಸ್​ಬುಕ್ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

ಈ ಸುದ್ದಿಯನ್ನೂ ಓದಿ: Actress Shashikala: ಬಲವಂತವಾಗಿ ನಿರ್ದೇಶಕನ ಮದುವೆಯಾಗಿ ಕಿರುಕುಳ; ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್‌

ಇದೀಗ ಕೆಎಸ್ ರಾಮ್​ಜೀ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಅಪಪ್ರಚಾರ ಮಾಡಿದವರನ್ನು ತಕ್ಷಣವೇ ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ. ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್​ಜೀ ಹೇಳಿದ್ದಾರೆ. ಕನ್ನಡದ ಪ್ರಸಿದ್ಧ ನಿರ್ದೇಶಕ ನಿರ್ಮಾಪಕರ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿರುವುದು ಕಿರುತೆರೆ ಲೋಕದಲ್ಲಿ ಆತಂಕ ಸೃಷ್ಟಿ ಮಾಡಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »