Karunadu Studio

ಕರ್ನಾಟಕ

ಕುಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವು


ಶ್ರೀನಗರ: 

   ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ.ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಧ್ಯಾಹ್ನ ನಿವೃತ್ತ ಸೇನಾಧಿಕಾರಿ ಮಂಜೂರ್ ಅಹ್ಮದ್ ವಾಗೆ, ಅವರ ಪತ್ನಿ ಮತ್ತು ಮಗಳ ಕಡೆಗೆ ಉಗ್ರರು ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ದಾಳಿಯ ಬಳಿಕ ಮೂವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

  ವೈದ್ಯರ ಪ್ರಕಾರ, ಕಿಬ್ಬೊಟ್ಟೆಯ ಭಾಗಕ್ಕೆ ಗುಂಡು ತಗುಲಿದ ನಿವೃತ್ತ ಸೇನಾಧಿಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗಾಡಾಗಿದ್ದಾರೆ. ಕಾಲಿಗೆ ಗುಂಡು ತಗುಲಿದ ಅವರ ಪತ್ನಿ ಮತ್ತು ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

   ಉಗ್ರರ ದಾಳಿಯ ನಂತರ, ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಯೋಧರ ತುಕಡಿ ಸ್ಥಳಕ್ಕೆ ತಲುಪಿದೆ. ದಾಳಿಕೋರರನ್ನು ಪತ್ತೆಹಚ್ಚಲು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಹಿರಿಯ ಭದ್ರತಾ ಅಧಿಕಾರಿಗಳು ಸಹ ಆ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »