Karunadu Studio

ಕರ್ನಾಟಕ

ಚಳಿಯ ಬಾಣಲೆಯಿಂದ ಬಿಸಿಲಿನ ಬೆಂಕಿಗೆ ಬಿದ್ದ ರಾಜ್ಯದ ಜನ….!


ಬೆಂಗಳೂರು:

    ರಾಜ್ಯದ ವಾತಾವರಣ  ದಿಡೀರ್‌ ಬದಲಾಗಿದೆ. ಕಳೆದ ವಾರದವರೆಗೂ ಅತಿ ಚಳಿಯಿಂದ  ಮರಗಟ್ಟಿಹೋಗಿದ್ದ ರಾಜ್ಯದ ಜನ ನಿಧಾನವಾಗಿ ಬಿಸಿಲಿನ ಧಗೆ  ಎದುರಿಸತೊಡಗಿದ್ದಾರೆ. ಈ ಬಾರಿ ಉಷ್ಣದ ಅಲೆ  ಬೀಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

   ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಫೆಬ್ರವರಿ ತಿಂಗಳಿಂದಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಈ ಬಾರಿ ರಣಬಿಸಿಲಿನ ಬೇಸಿಗೆ ಇರುವುದು ನಿಚ್ಚಳವಾಗಿದೆ. ಜತೆಗೆ, ಉಷ್ಣ ಅಲೆ ಬೀಸುವ ಎಲ್ಲ ಲಕ್ಷಣ ದಟ್ಟವಾಗಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.

   ಮಂಗಳವಾರ ಕಲಬುರಗಿಯಲ್ಲಿ ಅತಿ ಹೆಚ್ಚು 36.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ವಾಡಿಕೆಗಿಂತ 3.6 ಡಿ.ಸೆ. ಅಧಿಕವಾಗಿದೆ. ಅದೇ ರೀತಿ ಬಾಗಲಕೋಟೆಯಲ್ಲಿ 34.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ವಾಡಿಕೆ ಪ್ರಮಾಣಕ್ಕಿಂತ 4.5 ಡಿ.ಸೆ. ಹೆಚ್ಚಾಗಿದೆ. ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಬಿಸಿಲು ದಾಖಲಾಗುತ್ತಿದೆ. ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 4 ಡಿ.ಸೆ. ವರೆಗೆ ಹೆಚ್ಚಾಗಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಬಿಸಿಲು ಹೆಚ್ಚಾಗಿದೆ.

   ಇಷ್ಟು ದಿನ ಬಿಸಿಲು ಕಡಿಮೆ ಇತ್ತು. ಇದೀಗ ಗರಿಷ್ಠ ಉಷ್ಣಾಂಶದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್ ಹೆಚ್ಚಾದರೂ ಭಾರೀ ಬಿಸಿಲಿನ ಅನುಭವ ಆಗಲಿದೆ. ಪೂರ್ಣ ಪ್ರಮಾಣದಲ್ಲಿ ಬೇಸಿಗೆ ಶುರುವಾಗುತ್ತಿದಂತೆ ಇನ್ನಷ್ಟು ಹೆಚ್ಚಾಗಲಿದೆ. ಇದರ ಪರಿಣಾಮದಿಂದ ರಾಜ್ಯದಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

   ಈಗಾಗಲೇ ಭಾರತೀಯ ಹವಾಮಾನ ಇಲಾಖೆ ದೇಶದ ಎಲ್ಲ ರಾಜ್ಯದ ಅಧಿಕಾರಿಗಳಿಗೆ ಉಷ್ಣ ಅಲೆ ಕುರಿತು ಜಾಗೃತಿ, ಕ್ರಿಯಾಯೋಜನೆ ಸಿದ್ದಪಡಿಸಲು ಕಾರ್ಯಾಗಾರ ನಡೆಸುತ್ತಿದೆ. ಭಾರೀಬಿಸಿಲು ಇದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಬಿಸಿಲಿನ ತಾಪಕ್ಕೆ ಮೋಡ ಕಟ್ಟಿ ಏಕಾಏಕಿ ಮಳೆ ಸುರಿಯುವ ಸಾಧ್ಯತೆಯೂ ಇರಲಿದೆ ಎಂದು ವಿವರಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »