Karunadu Studio

ಕರ್ನಾಟಕ

ಬೆಂಗಳೂರು : ಎಗ್ಗಿಲ್ಲದೆ ನಡೆಯುತ್ತಿದೆ ನಕಲಿ ಉತ್ಪನ್ನದ ಮಾರಾಟ


ಬೆಂಗಳೂರು

  ಕೆಲವು ನಕಲಿ ವೀರರು ಬ್ರಾಂಡೆಡ್ ಉತ್ಪನ್ನಗಳನ್ನೇ ಹೋಲುವಂತೆ ನಕಲಿ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಮೂಲಕ ಗ್ರಾಹಕರನ್ನು ವಂಚಿಸುತ್ತಿರುವುದು ಬಯಲಾಗಿದೆ.

   ಕಾಟನ್ ಪೇಟೆಯಲ್ಲಿ ನಕಲಿ ಸರ್ಫ್ ಎಕ್ಸೆಲ್, ರಿನ್, ವ್ಹೀಲ್, ಏರಿಯಲ್, ಟೈಡ್, ಗುಡ್ ನೈಟ್ ಮತ್ತು ಆಲ್ ಔಟ್ ಸೇರಿ ಪ್ರತಿಷ್ಠಿತ ಕಂಪನಿಗಳ ಉತ್ಪನ್ನಗಳನ್ನ ಇಟ್ಟು ಮಾರಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ. ಈ ದೂರು ಆಧರಿಸಿ ಸಿಸಿಬಿ ಅಧಿಕಾರಿಗಳು ಗೋಡೌನ್ ಮತ್ತು ಮಾದನಾಯಕನಹಳ್ಳಿ ಠಾಣವ್ಯಾಪ್ತಿಯ ಕಾಚೋಹಳ್ಳಿಯ ಕಾರ್ಖಾನೆ ಮೇಲೆ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ನಕಲಿ ಉತ್ಪನ್ನಗಳನ್ನು ಸೀಜ್ ಮಾಡಿದ್ದಾರೆ. ಹೀಗೆ ವಶಪಡಿಸಿಕೊಂಡ ನಕಲಿ ಮಾಲುಗಳ ಅಂದಾಜು ಮೌಲ್ಯ 1.75 ಕೋಟಿ ರೂ. ಎನ್ನಲಾಗಿದೆ.

  ಸದ್ಯ ನಕಲಿ ಉತ್ಪನ್ನಗಳ ದಂಧೆ ನಡೆಸುತ್ತಿದ್ದ ಪ್ರಮುಖ ಆರೋಪಿ ದಳಪತ್ ಸಿಂಗ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಚೋಹಳ್ಳಿಯಲ್ಲಿ ನಕಲಿ ಉತ್ಪನ್ನಗಳ ಕಾರ್ಖಾನೆ ತೆರೆದಿದ್ದ ದಳಪತ್ ಸಿಂಗ್ ನಕಲಿ ಡಿಟರ್ಜೆಂಟ್ ಪೌಡರ್ ಮತ್ತು ಸೊಳ್ಳೆ ನಿವಾರಕ ದ್ರವಗಳನ್ನು ಉತ್ಪಾದಿಸುತ್ತಿದ್ದ. ಈ ನಕಲಿ ಉತ್ಪನ್ನಗಳಿಗೆ ಬೇಕಾದ ಲೇಬಲ್​ಗಳನ್ನ ಗುಜರಾತ್​ನ ಸೂರತ್ ನಲ್ಲಿರುವ ಕೆಲವು ಪ್ರಿಂಟಿಂಗ್ ಹಬ್‌ಗಳಿಂದ ದೊಡ್ಡ ಪ್ರಮಾಣದಲ್ಲಿ ತರಿಸಿಕೊಳ್ಳುತ್ತಿದ್ದ.  

ನಕಲಿ ಉತ್ಪನ್ನಗಳನ್ನು ಹುಬ್ಬಳ್ಳಿ, ಬೆಳಗಾವಿ, ಕೋಲಾರ, ಮಂಗಳೂರು, ಚೆನ್ನೈ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಪೂರೈಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ನಕಲಿ ದಂಧೆಯ ಜಾಲ ದೊಡ್ಡದಾಗಿದ್ದು ಸಿಸಿಬಿ ಪೊಲೀಸರು ಮತ್ತಷ್ಟು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »