Karunadu Studio

ಕರ್ನಾಟಕ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!


ಮುಂಬೈ:

     ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಲ್ಲಿ ಅಕ್ರಮ ಎಸಗಿದ ಆರೋಪ ಮೇಲೆ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ  ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನಿಲ್ ಮಿಶ್ರಾ ಮತ್ತು ಅವರ ಪುತ್ರ ಅಭಿಷೇಕ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿಸಿದೆ. ಅಷ್ಟೇ ಅಲ್ಲದೆ ಮಿಶ್ರಾ ಅವರ ಪತ್ನಿ ಪಾರ್ವತಿ ಮಿಶ್ರಾ ಮತ್ತು ಮಗಳು ಶ್ವೇತಾ ಮಿಶ್ರಾ ಕೂಡ ಹಗರಣದ ಭಾಗವಾಗಿದ್ದಾರೆ ಎಂದು ಆರೋಪಿಸಲಾಗಿದೆ.

   ವರದಿಯ ಪ್ರಕಾರ, ಮುಂಬೈನ ಬಾಂದ್ರಾ ಪೊಲೀಸರು ಫೆಬ್ರವರಿ 5 ರಂದು ಅನಿಲ್ ಮಿಶ್ರಾ ಮತ್ತು ಅವರ ಮಗ ಅಭಿಷೇಕ್ ವಿರುದ್ಧ ಭಾರತೀಯ ದಂಡ ಸಂಹಿತೆಯ  ಸೆಕ್ಷನ್ 318 (4) ಮತ್ತು 319 (2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿಯ ಚಿತ್ರಪತ್ ಅಘಾಡಿ ಘಟಕದ ರಾಜ್ಯ ಅಧ್ಯಕ್ಷ ಸಮೀರ್ ದೀಕ್ಷಿತ್ ಎಂಬುವವರು ಇವರ ವಿರುದ್ಧ ದೂರು ದಾಖಲಿಸಿದ್ದರು.

   ಉತ್ತರ ಪ್ರದೇಶದ ಗೋರಖ್‌ಪುರದವರಾದ ಮಿಶ್ರಾ, ಈ ಹಿಂದೆ ಚಲನಚಿತ್ರ ನಿರ್ಮಾಪಕ ಅನಿಲ್ ಶರ್ಮಾ ಅವರ ಸ್ಪಾಟ್ ಬಾಯ್ ಆಗಿದ್ದರು. ನಂತರ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಎಂಬ ತಮ್ಮದೇ ಆದ ಸಂಸ್ಥೆಯನ್ನು ಸ್ಥಾಪಿಸಿ ಚಲನಚಿತ್ರ ನಟರಿಗೆ ಪ್ರಶಸ್ತಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತನಿಖೆಯಲ್ಲಿ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ   ಅಧಿಕೃತವಾಗಿ ನೋಂದಾಯಿಸಲ್ಪಟ್ಟಿಲ್ಲ ಎಂದು ತಿಳಿದು ಬಂದಿದೆ. 

   ಮಿಶ್ರಾ ಫೆಬ್ರವರಿ 20 ರಂದು ಬಾಂದ್ರಾದ ಐದು ಪಂಚತಾರಾ ಹೋಟೆಲ್ ತಾಜ್ ಲ್ಯಾಂಡ್ಸ್ ಎಂಡ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆಯೋಜನೆಗಾಗಿ ಇಂಟರ್‌ನ್ಯಾಷನಲ್ ಟೂರಿಸಂ ಫೆಸ್ಟಿವಲ್ ಪ್ರೈವೇಟ್ ಲಿಮಿಟೆಡ್ ಎಂಬ ಮುಚ್ಚಲಾದ ಕಂಪನಿಯಿಂದ ಹೆಸರಿನಲ್ಲಿ ಅನುಮತಿ ಪಡೆಯಲಾಗಿತ್ತು. ಇದೀಗ ಆ ಕಾರ್ಯಕ್ರಮವೂ ರದ್ಧಾಗುವ ಸಾಧ್ಯತೆ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »