Karunadu Studio

ಕರ್ನಾಟಕ

ಮೋದಿ ಬದಲಿಸಿ, ದೇಶ ಉಳಿಸಿ : ಸಂತೋಷ್ ಲಾಡ್


ಹಾಸನ:

  ಅಮೆರಿಕದಿಂದ ಕಾಲಿಗೆ ಚೈನ್ ಹಾಕಿಕೊಂಡು ದೇಶದ ಜನರನ್ನು ತಂದು ಬಿಸಾಕಿದ್ದು ಇಡೀ ದೇಶಕ್ಕೆ ಅವಮಾನ ಮಾಡಿದರು. ಭಾರತದಲ್ಲಿ 18 ಲಕ್ಷ ಜನ ಪಾಸ್​ಪೋರ್ಟ್​ ಸರೆಂಡರ್ ಮಾಡಿದ್ದಾರೆ. ಆದರೆ, ಇದರ ಬಗ್ಗೆ ಯಾವುದೇ ಚರ್ಚೆಯಾಗುತ್ತಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

   ಹಾಸನದಲ್ಲಿ ಮಾತನಾಡಿದ ಅವರು, ಕಳೆದ 11 ವರ್ಷದಿಂದ ಏನನ್ನೂ ಮಾಡಿಲ್ಲ. ಲೆಕ್ಕ ಇಲ್ಲ, ಬುಕ್ ಇಲ್ಲ. ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ. 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ. ಆದರೆ, ಅವರ ಕಣ್ಣುಗಳು ಹೊಳೆಯುತ್ತಿವೆ. ಏನು ಕೆಲಸ ಮಾಡ್ತಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ ಎಂದು ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕತೆ ಕುಸಿದಿರುವ ಬಗ್ಗೆ ಲಾಡ್ ಆಕ್ಷೇಪ ವ್ಯಕ್ತಪಡಿಸಿದಲ್ಲದೇ, ಪ್ರಧಾನಮಂತ್ರಿ ಮೋದಿಯವರ ಜೀವನಶೈಲಿ ಕುರಿತು ಕಿಡಿಕಾರಿದರು.

   ಮೋದಿ ಒಂದು ಪ್ರೆಸ್ ಮೀಟ್ ನಡೆಸಲಿ: ರಾಜಕೀಯ ವಿಷಯದ ಚರ್ಚೆಗಳಿಂದ ದೂರವಿರುವುದರ ಬಗ್ಗೆ ಕಿಡಿಕಾರಿದ ಲಾಡ್, ಎಲ್ಲಾ ರಾಜ್ಯಗಳಿಗೆ ಹೋಗಿ ಮೋದಿ ಸಾಹೇಬ್ರು ಪ್ರೆಸ್ ಮೀಟ್ ಮಾಡಲಿ. ಎಂದಾದರೂ ಓಪನ್ ಡಿಸ್ಕಷನ್ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

   11 ವರ್ಷದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ಮಾಡಿದ್ದಾರಾ? ಕೇವಲ ಮನ್ ಕೀ ಬಾತ್ ಎನ್ನುತ್ತಾರೆ. ಕಳೆದ ಲೋಕಸಭೆ ಚುನಾವಣೆ ವೇಳೆ ಮೋದಿಯವರು ಮಂಗಳಸೂತ್ರ, ಪಾಕಿಸ್ತಾನ ಎರಡೇ ಮಾತನಾಡಿದ್ದು. 10 ವರ್ಷದಿಂದ ಬಿಜೆಪಿಯವರಿಗೆ ಮೋದಿ ಬಿಟ್ಟರೆ ಯಾವ ನಾಯಕರು ಕಾಣಲಿಲ್ಲವೇ? ಮಹಾರಾಜ ಅಲ್ಲಿಂದ ಇಳಿಯುವುದೇ ಪರಿಹಾರ ಎಂದರು.

  ರಾಹುಲ್ ಗಾಂಧಿ ಜೊತೆ ಮೋದಿಯವರು 5 ಗಂಟೆ ಚರ್ಚೆ ಮಾಡುತ್ತಾರಾ ಎಂದು ಸವಾಲು ಹಾಕಿದ ಸಂತೋಷ್‌ ಲಾಡ್, ಬಿಜೆಪಿಯಲ್ಲಿ ಕೆಲಸ ಮಾಡುವವರಿಗೆ ಪ್ರಧಾನ ಮಂತ್ರಿ ಹುದ್ದೆ ಕೊಟ್ಟರೆ ದೇಶ ಉಳಿಯುತ್ತದೆ. ಈಗಾಗಲೇ ದೇಶ ನೂರಾರು ವರ್ಷ ಹಿಂದೆ ಸಾಗಿದೆ. ಪ್ರಧಾನಿ ಬದಲಾದರೆ ದೇಶದ ಆರ್ಥಿಕ ಪರಿಸ್ಥಿತಿ ಉಳಿಯುತ್ತದೆ. ಯುವಕರೂ ಉಳಿಯುತ್ತಾರೆ ಎಂದರು. ಖೇಲೋ ಇಂಡಿಯಾಗೆ ಬಿಡುಗಡೆ ಮಾಡಿದ ಹಣದಲ್ಲಿ ಬಹುತೇಕ ಪಾಲು ಉತ್ತರ ಪ್ರದೇಶ ಮತ್ತು ಗುಜರಾತ್‌ಗೆ ಕೊಟ್ಟರು. ಆದರೆ ಪದಕ ಬರಲಿಲ್ಲ. ಹರಿಯಾಣಗೆ ₹70 ಕೋಟಿ ನೀಡಿದರು. ಅಲ್ಲಿ ಹೆಚ್ಚು ಮಂದಿ ಪದಕ ಗೆದ್ದರು. ಈ ರೀತಿ ಆಡಳಿತ ಕೇಂದ್ರ ಸರ್ಕಾರದ್ದಾಗಿದೆ ಎಂದು ಟೀಕಿಸಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »