Karunadu Studio

ಕರ್ನಾಟಕ

ಪ್ಯಾಂಟ್ ಜೇಬಿನಲ್ಲಿದ್ದ ಫೋನ್ ಸ್ಫೋಟ; ಮಹಿಳೆಗೆ ತಗುಲಿದ ಬೆಂಕಿ


ಬ್ರೆಸಿಲಿಯ:

     ಓವರ್‌ ಹೀಟ್‌ನಿಂದಾಗಿ ಮೊಬೈಲ್‌ ಸ್ಫೋಟಗೊಳ್ಳುವ ಘಟನೆಗಳು ಆಗಾಗ ವರದಿಯಾಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಬ್ರೆಸಿಲಿಯದಲ್ಲಿ ನಡೆದಿದೆ. ಮಹಿಳೆಯೊಬ್ಬಳು ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಫೋನ್ ಇಟ್ಟಿದ್ದರಿಂದ ಅನಾಹುತವೊಂದು ಸಂಭವಿಸಿದೆ. ಮಹಿಳೆ ಸೂಪರ್ ಮಾರ್ಕೇಟ್‍ನಲ್ಲಿದ್ದಾಗ ಆಕೆಯ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟಗೊಂಡಿದೆ. ಇದರಿಂದ ಆಕೆಯ ಹಿಂಭಾಗ ಹೊತ್ತಿ ಉರಿದಿದೆ. ಈ ಭಯಾನಕ ದೃಶ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆದ ವಿಡಿಯೊದಲ್ಲಿ, ಮಹಿಳೆ ಸೂಪರ್‌ ಮಾರ್ಕೆಟ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಆಕೆಯ ಡೆನಿಮ್ ಪ್ಯಾಂಟ್‍ಗೆ ಬೆಂಕಿ ಹೊತ್ತಿಕೊಂಡಿದೆ. ವಿಡಿಯೊ ನೋಡಿದ ನೆಟ್ಟಿಗರು ಭಾರೀ ಆಘಾತಗೊಂಡಿದ್ದಾರೆ.

    ಮಹಿಳೆ ಸೂಪರ್‌ ಮಾರ್ಕೆಟ್‌ನಲ್ಲಿ ಪರ್ಚೇಸ್‌ ಮಾಡುತ್ತಿದ್ದಾಗ ಏಕಾಏಕಿ ಆಕೆಯ ಡೆನಿಮ್ ಪ್ಯಾಂಟ್‍ಗೆ ಬೆಂಕಿ ಹೊತ್ತಿಕೊಂಡಿದೆ. ಅವಳ ಪಕ್ಕದಲ್ಲಿ ನಿಂತಿದ್ದ ಆಕೆಯ ಪತಿ ಬೆಂಕಿ ನಂದಿಸಲು ಹರಸಾಹಸ ಮಾಡಿದ್ದಾನೆ. ಈ ದೃಶ್ಯ ಅಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ಈ ದೃಶ್ಯ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಫೋನ್ ಮೊಟೊರೊಲಾ ಮೋಟೋ ಇ 32 ಆಗಿದ್ದು, ಇದನ್ನು ಒಂದು ವರ್ಷದ ಹಿಂದೆ ಖರೀದಿಸಲಾಗಿತ್ತಂತೆ.  

   ವರದಿಗಳ ಪ್ರಕಾರ, ಬ್ರೆಜಿಲಿಯನ್ ಸೂಪರ್‌ ಮಾರ್ಕೆಟ್‌ನಲ್ಲಿ ಶಾಪಿಂಗ್ ಮಾಡುವ ಸಮಯದಲ್ಲಿ ಮೊಬೈಲ್ ಫೋನ್ ಸ್ಫೋಟದಿಂದ ಮಹಿಳೆಗೆ ಗಂಭೀರ ಗಾಯಗಳಾಗಿವೆಯಂತೆ. ಆ ಮಹಿಳೆ ಮೊಟೊರೊಲಾ ಮೋಟೋ ಇ 32 ಮೊಬೈಲ್‍ ಅನ್ನು ಬಳಸುತ್ತಿದ್ದಳು, ಅದು ಅವಳ ಹಿಂಭಾಗದ ಜೇಬಿನಲ್ಲಿ ಸ್ಫೋಟಗೊಂಡು ಪ್ಯಾಂಟ್‌ಗೆ ಬೆಂಕಿ ತಾಗಿತ್ತು.ಘಟನೆಯ ನಂತರ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಅವಳ ಕೈ, ಮುಂಗೈ, ಬೆನ್ನು ಮತ್ತು ಪೃಷ್ಠದ ಮೇಲೆ ಸುಟ್ಟ ಗಾಯಗಳಾಗಿವೆ. ಅಲ್ಲದೇ ಈ ಭಯಾನಕ ಘಟನೆಯಲ್ಲಿ ಅವಳ ಕೂದಲಿನ ಕೆಲವು ಭಾಗವೂ ಸುಟ್ಟುಹೋಗಿದೆ ಎನ್ನಲಾಗಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »