Karunadu Studio

ಕರ್ನಾಟಕ

ರಾಜ್ಯ ಚಲನಚಿತ್ರ ಅಕಾಡೆಮಿ ಸದಸ್ಯರಾಗಿ ನೇಮಕ…..!


ಬೆಂಗಳೂರು:

  ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಸದಸ್ಯರಾಗಿ ಏಳು ಮಂದಿಯನ್ನು ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪತ್ರಿಕೋದ್ಯಮ, ಸಿನಿಮಾ ಕ್ಷೇತ್ರದ ಪ್ರತಿನಿಧಿಗಳನ್ನು ಸಾಮಾನ್ಯ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲಾಗಿದೆ.

  ಹಿರಿಯ ಪತ್ರಕರ್ತರಾದ ಕೊಪ್ಪಳದ ಸಾವಿತ್ರಿ ಮಜುಂದಾರ್, ಶಿವಮೊಗ್ಗದ ನಮ್ಮ ನಾಡು ಕನ್ನಡ ಡೈಲಿಯ ಸಿನಿಮಾ ವಿಶ್ಲೇಷಕ ಹೆಚ್ ದೇಶಾದ್ರಿ, ಚಿದಾನಂದ ಪಟೇಲ್ ಹಾಗೂ ಸಿನಿಮಾ ಕಲಾವಿದರಾದ ನಿಖಿತಾಸ್ವಾಮಿ, ಸಿನಿಮಾ ಪ್ರಚಾರ ಡಿ.ಜಿ. ವೆಂಕಟೇಶ್, ಚಿತ್ರೋದ್ಯಮಿ ವಿಷ್ಣು ಕುಮಾರ್ ಹಾಗೂ ಸಿನಿಮಾ ತಂತ್ರಜ್ಞರಾದ ಐವಾನ್ ಡಿಸಿಲ್ವ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಮಿತಿಯ ಸದಸ್ಯರುಗಳನ್ನಾಗಿ ನೇಮಿಸಲಾಗಿದೆ. ನಿಗಮ ಮಂಡಳಿ ಪಟ್ಟಿ ಬಿಡುಗಡೆ: ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸಾಧು ಕೋಕಿಲ ನೇಮಕ; ಇಲ್ಲಿದೆ ಸಂಪೂರ್ಣ ಮಾಹಿತಿ

  ಸರ್ಕಾರದ ಮುಂದಿನ ಆದೇಶದವರೆಗೂ ನೂತನ ಸದಸ್ಯರು ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

 



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »