Karunadu Studio

ಕರ್ನಾಟಕ

ರಣವೀರ್ ಅಲ್ಹಾಬಾದಿಯಾ ಪ್ರಕರಣ : ರಕ್ಷಣೆ ನೀಡಿದರು ‘ಸುಪ್ರೀಂ’ ತರಾಟೆ


ನವದೆಹಲಿ: 

    ಯೂಟ್ಯೂಬ್ ಕಾರ್ಯಕ್ರಮವೊಂದರಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಯೂಟ್ಯೂಬರ್ ರಣವೀರ್ ಅಲ್ಹಾಬಾದಿಯಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸುಪ್ರೀಂ ಕೋರ್ಟ್ ಮಂಗಳವಾರ ಬಂಧನದಿಂದ ರಕ್ಷಣೆ ನೀಡಿದೆ. ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

   ಅಲ್ಹಾಬಾದಿಯಾ ಅವರ ಹೇಳಿಕೆಗಳ ಬಗ್ಗೆ ಕೆರಳಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ರಣವೀರ್ ಅವರ ಮನಸ್ಸಿನಲ್ಲಿದ್ದ ಕೊಳಕನ್ನು ಯೂಟ್ಯೂಬ್ ಶೋನಲ್ಲಿ ವಾಂತಿ ಮಾಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

   ಯಾವುದೇ ಬಲವಂತದ ಕ್ರಮದಿಂದ ರಣವೀರ್ ಅಲ್ಹಾಬಾದಿಯಾ ಅವರನ್ನು ರಕ್ಷಿಸಬೇಕು. ಮೇಲಾಗಿ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಅವರ ಪರ ಹಿರಿಯ ವಕೀಲ ಅಭಿನವ್ ಚಂದ್ರಚೂಡ್ ಅವರ ಮನವಿಗೆ ಒಪ್ಪಿಗೆ ನೀಡಿದ ಸುಪ್ರೀಂ ಕೋರ್ಟ್, ಬಂಧನದಿಂದ ರಕ್ಷಣೆ ನೀಡಿದೆ.

   ಮುಂಬೈ ಮತ್ತು ಗುವಾಹಟಿಯಲ್ಲಿ ಸದ್ಯ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಎಂಬ ಯೂಟ್ಯೂಬ್ ಶೋನಲ್ಲಿ ಅವರು ನೀಡಿದ ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಮತ್ತೆ ಅವರ ವಿರುದ್ಧ ಯಾವುದೇ ಎಫ್‌ಐಆರ್‌ಗಳನ್ನು ದಾಖಲಿಸುವಂತಿಲ್ಲ ಎಂದು ನ್ಯಾಯಪೀಠ ಹೇಳಿದೆ. 



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »