ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ರವಿಶಂಕರ್ ಪ್ರಸಾದ್, ಒಪಿ ಧಂಕರ್ ದೆಹಲಿ ನೂತನ ಮುಖ್ಯಮಂತ್ರಿಯ ಹೆಸರನ್ನು ಪ್ರಕಟಿಸಲಿದ್ದಾರೆ.ಪಕ್ಷದ ಶಾಸಕರಿಂದ ಆಯ್ಕೆಯಾದ ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ರಾಜಭವನಕ್ಕೆ ತೆರಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಭೇಟಿ ಮಾಡಿ, ದೆಹಲಿಯಲ್ಲಿ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.
ಈ ಮಧ್ಯೆ, ನಾಳೆ ಮಧ್ಯಾಹ್ನ 12:35ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.
ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟ ಸಹೋದ್ಯೋಗಿಗಳು, ಎನ್ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಸುಮಾರು 50,000 ಜನ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿದೆ.