Karunadu Studio

ಕರ್ನಾಟಕ

ಕೊಲ್ಕತ್ತಾವನ್ನೇ ಬಿಚ್ಚಿ ಬೀಳಿಸಿದ ಡೇ ಕುಟುಂಬದ ಮಿಸ್ಟರಿ ಕೇಸ್‌: ಏನಿದು ಗೊತ್ತಾ ಕೇಸ್‌ …?


ಕೊಲ್ಕತ್ತಾ:

    ನಗರದಲ್ಲಿ ಬೆಚ್ಚಿಬೀಳಿಸುವಂತ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಮಹಿಳೆಯರು ಮೃತಪಟ್ಟಿದ್ದರೆ, ಅದೇ ಕುಟುಂಬದ ಮೂವರಿಗೆ ಭೀಕರ ಕಾರು ಅಪಘಾತವಾಗಿದೆ. ಸದ್ಯ ಈ ಘಟನೆಯ ಸತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಕೋಲ್ಕತ್ತಾದ ಮನೆಯೊಂದರಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

   ಬುಧವಾರ ಮುಂಜಾನೆ ಇಎಂ ಬೈಪಾಸ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಅದೇ ಕುಟುಂಬದ ಮೂವರು ಪುರುಷರು ಗಾಯೊಂಡಿದ್ದಾರೆ. ಈ ಘಟನೆ ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದ್ದು, ಇದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಯೋಜನೆ ರೂಪಿಸಿತ್ತಾ? ಎಂದು ಪೊಲೀಸರು ಶಂಕಿಸಿದ್ದಾರೆ.

   ಪೂರ್ವ ಕೋಲ್ಕತ್ತಾದ ಟ್ಯಾಂಗ್ರಾದಲ್ಲಿರುವ ಪ್ರಸುನ್ ಡೇ (48), ಪ್ರಣಯ್ ಡೇ (44) ಸಹೋದರರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಸುನ್ ಡೇ, ಪ್ರಣಯ್ ಡೇ ಪ್ರಣಯ್ ಅವರ ಮಗ ಪ್ರತಿಪ್ ಡೇ ಪ್ರಯಾಣಿಸುತ್ತಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪವಾಡ ಸದೃಶ್ಯವಾಗಿ ಅವರು ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿರುವ ಪ್ರಣಯ್ ಡೇ ತಾವು ಆತ್ಮಹತ್ಯೆಗೆ ಯತ್ನಿಸುತ್ತಿರುವುದಾಗಿಯೂ, ಉದ್ದೇಶಪೂರ್ವಕವಾಗಿ ಕಾರನ್ನು ಮೆಟ್ರೋ ಕಂಬಕ್ಕೆ ಡಿಕ್ಕಿ ಹೊಡೆದಿರುವುದಾಗಿಯೂ, ತನ್ನ ಮನೆಯಲ್ಲಿ ಮನೆಯಲ್ಲಿ ಮೂವರು ಮೃತಪಟ್ಟಿರುವ ಬಗ್ಗೆ ಹೇಳಿದ್ದಾರೆ.

   ನಂತರ ಅವರ ಮನೆಗೆ ಹೋಗಿ ಪೊಲೀಸರು ಪರಿಶೀಲನೆ ನಡೆಸಿದಾಗ ಮೊದಲ ಮಹಡಿಯಲ್ಲಿ, ಶವಗಳು ಪತ್ತೆಯಾಗಿವೆ. ಇಬ್ಬರ ಗಂಟಲಿನ ಮೇಲೆ ಸೀಳು ಗಾಯಗಳಾಗಿದ್ದು, ಭಾರೀ ರಕ್ತಸ್ರಾವದ ನಂತರ ಮೃತಪಟ್ಟಿದ್ದಾರೆ. 14 ವರ್ಷದ ಬಾಲಕಿಯ ಎದೆ, ಕಾಲುಗಳು, ತುಟಿ ಮತ್ತು ತಲೆಯ ಮೇಲೆ ಗಾಯಗಳಾಗಿವೆ. ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಡಿಯೋಗ್ರಾಫರ್ ಮತ್ತು ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 

   ಆಸ್ಪತ್ರೆಗೆ ದಾಖಲಾದ ಮೂವರು ಜನರ ವೀಡಿಯೊ ಮತ್ತು ಲಿಖಿತ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಕುಟುಂಬ ಸದಸ್ಯರು ಉದ್ದೇಶಪೂರ್ವಕವಾಗಿಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ವ್ಯಾಪಾರ ನಡೆಸುತ್ತಿದ್ದ ಕುಟುಂಬವು ಆರ್ಥಿಕ ಸಂಕಷ್ಟದಲ್ಲಿತ್ತು ಇದು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ. ಡೇ ಸಹೋದರರು ಎರಡು ವರ್ಷಗಳಿಂದ ತಮ್ಮ ವ್ಯಾಪಾರ ಪರವಾನಗಿಯನ್ನು ನವೀಕರಿಸಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »