Karunadu Studio

ಕರ್ನಾಟಕ

ಗ್ರೇಟರ್ ಬೆಂಗಳೂರು ಮೂಲಕ ಪಾಲಿಕೆ ವಿಭಜನೆಗೆ ಬಿಬಿಎಂಪಿ ಸಜ್ಜು: ಬಿಜೆಪಿ


ಬೆಂಗಳೂರು

   ಕಳೆದ ಬಾರಿಯ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಿಂತ ಮುನ್ನವೇ ಬಿಬಿಎ‌ಂಪಿ ಚುನಾವಣೆ ನಡೆಯಬೇಕಿತ್ತು. ಆದರೆ ಪಾಲಿಕೆ ಚುನಾವಣೆ ವಿವಾದ ವಿಚಾರ ಕೋರ್ಟ್​ನಲ್ಲಿದೆ. ಸದ್ಯದ ಬೆಳವಣಿಗೆಗಳನ್ನ ಗಮನಿಸಿದರೆ, ಮುಂದಿನ ಎರಡು, ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ ನಿರೀಕ್ಷೆ ಇದೆ. ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಕೆಲಸ ಸೇರಿದಂತೆ ಹಲವು ವಿಚಾರಗಳಿಂದ ಬಿಬಿಎಂಪಿ ಚುನಾವಣೆಗೆ ಹಿನ್ನೆಡೆಯಾಗುತ್ತಿದೆ.

   ಗ್ರೇಟರ್ ಬೆಂಗಳೂರು ಯೋಜನೆಯಡಿ ಬೆಂಗಳೂರು ನಗರವನ್ನು 5 ಭಾಗಗಳಾಗಿ ವಿಂಗಡಿಸಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ವಿಚಾರವಾಗಿ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಸಮಿತಿ ಮಾಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಸದ್ಯ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಮಹಿಳೆಯರಿಗೆ ಶೇ 50 ಮೀಸಲಾತಿ ನೀಡಲಾಗುವ ವಿಚಾರ ಪ್ರಸ್ತಾಪಿಸಿದ್ದಾರೆ. ನಾವು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನ್ಯಾಯಾಲಯಕ್ಕೆ ನಾವು ಅಫಿಡವಿಟ್ ಸಲ್ಲಿಕೆ ಮಾಡಿದ್ದೇವೆ ಎಂದಿದ್ದಾರೆ.

   ಈ ಮಧ್ಯೆ, ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯ ಸಾಧಕಬಾಧಕಗಳನ್ನು ಚರ್ಚಿಸಲು ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಡಾ.ಸಿ.ಎನ್ ಅಶ್ವಥ್ ನಾರಾಯಣ, ಶಾಸಕ‌ ಮುನಿರತ್ನ ಸೇರಿದಂತೆ ಮಾಜಿ ಪಾಲಿಕೆ ಸದಸ್ಯರು ಭಾಗಿಯಾಗಿದ್ದರು. ಈ‌ ಮಸೂದೆ ವಿರೋಧಿಸಿ ಹೋರಾಟ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಯಾವುದೇ ಕಾರಣಕ್ಕೂ ಬೆಂಗಳೂರು ವಿಭಜನೆ ಬೇಡ ಅಂತ ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ. 



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »