Karunadu Studio

ಕರ್ನಾಟಕ

ಲಂಚ ಪಡೆಯಲು ಹೊಸ ಮಾರ್ಗ ಆಯ್ದುಕೊಂಡ ಪೊಲೀಸರು ..!


ಬೆಂಗಳೂರು

   ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಲಂಚದ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಆದರೆ, ಈ ಬಾರಿ ಬೆಂಗಳೂರು ಟ್ರಾಫಿಕ್ ಪೊಲೀಸರ ವಿರುದ್ಧದ ಆರೋಪ ಕೇಳಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ! ಏಕೆಂದರೆ, ಫೋನ್ ಪೇ, ಗೂಗಲ್​ ಪೇಯಲ್ಲೇ ಅವರು ಲಂಚ ಪಡೆಯುತ್ತಿರುವುದು ಬಯಲಾಗಿದೆ.

   ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ವಿಧಿಸುವ ನೆಪದಲ್ಲಿ ಬೆಂಗಳೂರಿನ ವೈಟ್​ಫೀಲ್ಡ್ ಸಂಚಾರ ಪೊಲೀಸರು ಪೋನ್ ಪೇ, ಗೂಗಲ್ ಪೇ ಮೂಲಕ ತಮ್ಮ ವೈಯಕ್ತಿಕ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. 

  ಫೆಬ್ರವರಿ 21 ರಂದು ವಾಹನ ಸವಾರರೊಬ್ಬರು ವರ್ತೂರು ಕರೆ ಬಳಿ ಓನ್ ವೇಯಲ್ಲಿ ಬಂದಿದ್ದರು. ರಾಚಮಲ್ಲ‌ ಎಂಬಾತ ಓನ್ ವೇಯಲ್ಲಿ ಬಂದು ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್ ಮಂಜುನಾಥ್ ವಾಹನವನ್ನು ಅಡ್ಡ ಹಾಕಿ ನಿಲ್ಲಿಸಿದರು. ವಾಹನ ಸವಾರ 1500 ರೂಪಾಯಿ ದಂಡ ಪಾವತಿಸಲು ಸಿದ್ಧರಾಗಿದ್ದರು. ಆದರೆ, ವಾಹನ ಸವಾರನಿಗೆ ದಂಡದ ರಸೀದಿ ನೀಡಲು ಮಂಜುನಾಥ್ ಸಿದ್ಧರಿರಲಿಲ್ಲ. ಕೊನೆಗೆ 500 ರೂಪಾಯಿ ಫೋನ್ ಪೇ ಮಾಡಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ. 

   ವೈಟ್​ಫೀಲ್ಡ್ ಸಂಚಾರ ಪೊಲೀಸರ ಲಂಚಾವಾತರದ ಬಗ್ಗೆ ವಾಹನ ಸವಾರ ರಾಚಮಲ್ಲ ಎಸಿಪಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ. ಕಾನ್ಸ್​ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಚಮಲ್ಲ ದೂರಿನಲ್ಲಿ ಆಗ್ರಹಿಸಿದ್ದಾರೆ. ಇ ಮೇಲ್ ಮೂಲಕ ಎಸಿಪಿ ರಮೇಶ್ ದೂರು ಸ್ವೀಕಾರ ಮಾಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ವೈಟ್ ಫೀಲ್ಡ್ ಸಂಚಾರಿ ಠಾಣೆ ಇನ್ಸ್​​ಪೆಕ್ಟರ್​​ಗೆ ಸೂಚನೆ ನೀಡಿದ್ದಾರೆ.

  ಬೆಂಗಳೂರಿನಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಕೆಲವು ಪ್ರದೇಶಗಳಲ್ಲಿ ಸಂಚಾರ ಪೊಲೀಸರೂ ಅದರ ಲಾಭ ಪಡೆದು ಲಂಚ ಪಡೆಯುತ್ತಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರಿಗೆ 1.6 ಲಕ್ಷ ರೂ. ದಂಡ ವಿಧಿಸಿದ ಬಗ್ಗೆ ಕೆಲವು ದಿನಗಳ ಹಿಂದೆ ಸುದ್ದಿಯಾಗಿತ್ತು. ಕೊನೆಗೆ ಅವರು ದಂಡದ ಮೊತ್ತ ವತಿಸಿದ್ದರು. ಸ್ಕೂಟರ್ ಚಾಲಕ ದಂಡದ ಮೊತ್ತವನ್ನು ಪಾವತಿಸಿದ ನಂತರ, ಪೊಲೀಸರು ವಶಪಡಿಸಿಕೊಂಡಿದ್ದ ವಾಹನವನ್ನು ಹಿಂದಿರುಗಿಸಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದರು. ದಂಡದ ಮೊತ್ತದ ರಶೀದಿ ಸುಮಾರ್ 20 ಮೀಟರ್‌ಗಳಷ್ಟು ಉದ್ದ ಇದ್ದು ಗಮನ ಸೆಳೆದಿತ್ತು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »