Karunadu Studio

ಕರ್ನಾಟಕ

ನಟ ಪೊಸಾನಿ ಮುರಳಿ ಬಂಧನ….! – Praja Pragathi


ಹೈದರಾಬಾದ್:

   ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ನಿನ್ನೆ ರಾತ್ರಿ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಪೋಸಾನಿ ಕೃಷ್ಣ ಅವರು ಕಾನೂನು ಸಂಕಷ್ಟ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. 2024ರ ನವೆಂಬರ್‌ನಲ್ಲಿ ಸಿಎಂ ಚಂದ್ರಬಾಬು ನಾಯ್ಡು ವಿರದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಗಲೂ ತಮ್ಮವಿರುದ್ಧ ಕೇಸ್ ದಾಖಲಾಗಿತ್ತು. ಸಮುದಾಯವೊಂದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕುರಿತು ಪೋಸಾನಿ ಕೃಷ್ಣ ಮುರಳಿ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಟನನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ. ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »