Karunadu Studio

ಕರ್ನಾಟಕ

ಕಾರು ಚಾಲಕನಿಗೆ ಕಪಾಳಕ್ಕೆ ಹೊಡೆದ ಮಾಜಿ ಸಿಎಂ ಮಗಳು….!


ದಿಸ್ಪುರ:

   ಅಸ್ಸಾಂನ ಮಾಜಿ ಮುಖ್ಯಮಂತ್ರಿ ಪ್ರಫುಲ್ಲ ಕುಮಾರ್ ಮಹಾಂತ ಅವರ ಪುತ್ರಿ, ಕಾರು ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫುಲ್ಲ ಕುಮಾರ್ ಮಹಾಂತ ಅವರ ಪುತ್ರಿ ಪ್ರಜೋಯೀತಾ ಕಶ್ಯಪ್, ವ್ಯಕ್ತಿಯೊಬ್ಬನ ಮೇಲೆ ಹಲ್ಲೆ  ಮಾಡಿದ್ದಾರೆ. ಮದ್ಯದ ಅಮಲಿನಲ್ಲಿ ಚಾಲಕ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಅವರು ಆರೋಪಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ. ಪ್ರಜೋಯೀತಾ ಕಶ್ಯಪ್ ಮುಂದೆ ವ್ಯಕ್ತಿಯೊಬ್ಬರು ಮಂಡಿಯೂರಿ ಕುಳಿತಿದ್ದು, ಆತನನ್ನು ನಿಂದಿಸುತ್ತಿರುವುದು ಮತ್ತು ಚಪ್ಪಲಿಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

   ಗುವಾಹಟಿಯ ದಿಸ್‌ಪುರ ಪ್ರದೇಶದ ಹೈ-ಸೆಕ್ಯುರಿಟಿ ಎಂಎಲ್‌ಎ ಹಾಸ್ಟೆಲ್‌ನ ಕ್ಯಾಂಪಸ್‌ನಲ್ಲಿ ಘಟನೆ ನಡೆದಿದ್ದು, ಈ ವೇಳೆ ಇತರ ಸಿಬ್ಬಂದಿ ಘಟನೆಯನ್ನು ವೀಕ್ಷಿಸುತ್ತಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಪ್ರಜೋಯೀತಾ ಕಶ್ಯಪ್, ಆ ವ್ಯಕ್ತಿ ತಮ್ಮ ಕುಟುಂಬಕ್ಕಾಗಿ ದೀರ್ಘಕಾಲದಿಂದಲೂ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಆತ ಯಾವಾಗಲೂ ಕುಡಿದು ನನ್ನ ಮೇಲೆ ಅವಾಚ್ಯವಾಗಿ ನಿಂದಿಸುತ್ತಿದ್ದ. ಈ ಬಗ್ಗೆ ಎಲ್ಲರಿಗೂ ತಿಳಿದಿದೆ. ನಾವು ಸಾಕಷ್ಟು ಬಾರಿ ಈ ವಿಷಯವಾಗಿ ಆತನನಿಗೆ ಎಚ್ಚರಿಕೆ ನೀಡಿದ್ದೆವು. ಆದರೂ ಕೂಡ ಆತ ಅದೇ ಚಾಳೆಯನ್ನು ಮುಂದುವರಿಸಿದ್ದ. ಇದೀಗ ಆತ ಎಲ್ಲ ಮಿತಿಗಳನ್ನು ಮೀರಿ ನಮ್ಮ ಮನೆ ಬಾಗಿಲಿಗೆ ಬಡಿಯಲು ಪ್ರಾರಂಭಿಸಿದ ಎಂದು ಅವರು ಹೇಳಿದ್ದಾರೆ.

   ಈ ಸಂಬಂಧ ಪೊಲೀಸರಿಗೆ ಏಕೆ ದೂರು ನೀಡಿಲ್ಲ ಎಂದು ಕೇಳಿದ್ದಕ್ಕೆ ಉತ್ತರಸಿದ ಕಶ್ಯಪ್, ಇಂತಹ ಸಮಸ್ಯೆಗಳು ಉದ್ಭವಿಸಿದಾಗ ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯನ್ನೇ ಪ್ರಶ್ನಿಸಲಾಗುತ್ತದೆ. ಇದು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಯ ವಿಷಯವನ್ನು ಎತ್ತುತ್ತದೆ ಎಂದು ಅವರು ಹೇಳಿದ್ದಾರೆ. ಚಾಲಕ ಸರ್ಕಾರಿ ಉದ್ಯೋಗಿಯೋ ಅಥವಾ ಕುಟುಂಬಕ್ಕಾಗಿ ವೈಯಕ್ತಿಕವಾಗಿ ಕೆಲಸ ಮಾಡುತ್ತಿದ್ದಾರೋ ಎಂಬುದನ್ನು ಅವರು ಬಹಿರಂಗ ಪಡಿಸಿಲ್ಲ.

    ಅಸೋಮ್ ಗಣ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರಫುಲ್ಲಕುಮಾರ್ ಮಹಾಂತ ಅವರು ಶಾಸಕರಾಗಿಲ್ಲದಿದ್ದರೂ ಅವರ ಕುಟುಂಬದೊಂದಿಗೆ ಶಾಸಕರ ಹಾಸ್ಟೆಲ್‌ನಲ್ಲಿ ಉಳಿಯಲು ಅವಕಾಶ ನೀಡಲಾಗಿದೆ. ಮಹಾಂತ ಅವರು ಅಸ್ಸಾಂನ ಮುಖ್ಯಮಂತ್ರಿಯಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದಾರೆ. 1985 ರಿಂದ 1990 ರವರೆಗೆ ಮೊದಲ ಬಾರಿ ಮತ್ತು 1996 ರಿಂದ 2001 ರವರೆಗೆ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »