Karunadu Studio

ಕರ್ನಾಟಕ

ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ: ಟ್ರಂಪ್‌


ವಾಷಿಂಗ್ಟನ್‌: 

    ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.ಅಮೆರಿಕದ ಆಮದುಗಳ ಮೇಲೆ ‘ಭಾರಿ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ.ಭಾರತ ನಮ್ಮ ಮೇಲೆ ಭಾರಿ ಸುಂಕ ವಿಧಿಸುತ್ತಿದೆ. ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ. ಅಂದಹಾಗೆ, ಅವರು ಸುಂಕ ಕಡಿತಕ್ಕೆ ಒಪ್ಪಿಕೊಂಡಿದ್ದಾರೆ. ಅವರು ಈಗ ತಮ್ಮ ಸುಂಕವನ್ನು ಕಡಿಮೆ ಮಾಡಲು ಬಯಸುತ್ತಾರೆ ಎಂದಿದ್ದಾರೆ

    ಅಮೆರಿಕದಿಂದ ಕಿತ್ತುಕೊಳ್ಳಲಾಗಿದೆ, ನಿಜಕ್ಕೂ ಅನ್ಯಾಯವಾಗಿದೆ. ಅದನ್ನು ನಾವು ತಡೆಯುತ್ತೇವೆ. ಪ್ರಸುತ್ತ ಸುಂಕುಗಳು ತಾತ್ಕಾಲಿಕ ಮತ್ತು ಸಣ್ಣವು. ಏಪ್ರಿಲ್ 2 ರಿಂದ ದೊಡ್ಡ ಬದಲಾವಣೆ ಎಂದು ಟ್ರಂಪ್‌ ತಿಳಿಸಿದ್ದಾರೆ.ಅಮೆರಿಕ ಜೊತೆಗಿನ ಯೋಜಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (ಬಿಟಿಎ) ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಶನಿವಾರ ಹೇಳಿದ್ದಾರೆ.

   ಎರಡೂ ಸರ್ಕಾರಗಳು ಬಹು-ವಲಯ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಚರ್ಚೆಗಳನ್ನು ಮುಂದುವರಿಸುವ ಪ್ರಕ್ರಿಯೆಯಲ್ಲಿವೆ. ಬಿಟಿಎ ಮೂಲಕ, ಸರಕು ಮತ್ತು ಸೇವಾ ವಲಯದಲ್ಲಿ ಭಾರತ-ಯುಎಸ್ ದ್ವಿಮುಖ ವ್ಯಾಪಾರವನ್ನು ಬಲಪಡಿಸುವುದು, ಮಾರುಕಟ್ಟೆ ಪ್ರವೇಶವನ್ನು ಹೆಚ್ಚಿಸುವುದು, ಸುಂಕ ಮತ್ತು ಸುಂಕ ರಹಿತ ಅಡೆತಡೆಗಳನ್ನು ಕಡಿಮೆ ಮಾಡುವುದು, ಎರಡೂ ದೇಶಗಳ ನಡುವೆ ಪೂರೈಕೆ ಸರಪಳಿ ಏಕೀಕರಣವನ್ನು ಬಿಗಿಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »