Karunadu Studio

ಕರ್ನಾಟಕ

ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ….!


ಬೆಂಗಳೂರು:

     ರಾಜಧಾನಿಯಲ್ಲಿ ನಮ್ಮ ಮೆಟ್ರೋ ಪ್ರಯಾಣ ದರವನ್ನು  ದುಪ್ಪಟ್ಟು ಹೆಚ್ಚಿಸಿದ ಕ್ರಮವನ್ನು ಖಂಡಿಸಿ, ದರವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಭಾನುವಾರ ಮೆಟ್ರೋ ರೈಲಿನ ಒಳಗಡೆ ಗ್ರೀನ್ ಪೀಸ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

     ಮೆಟ್ರೋ ದರ ಏರಿಕೆಯ ಒಂದು ತಿಂಗಳ ನಂತರವೂ ಜನರ ಆಕ್ರೋಶ, ಪ್ರತಿಭಟನೆ ನಿಂತಿಲ್ಲ. ನಿನ್ನೆ ಮೆಟ್ರೋದ ಒಳಗೆ ಗ್ರೀನ್‌ ಪೀಸ್‌ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿದ ಕಾರ್ಯಕರ್ತರು, ರೈಲಿನ ಒಳಗಡೆ ಬೆಲೆ ಏರಿಕೆಯಿಂದ ಅಸಮಾನತೆ ಏರಿಕೆ ಎಂಬ ಫಲ ಪ್ರದರ್ಶಿಸಿ ಮೌನ ಪ್ರತಿಭಟಿಸಿದರು. ಬಳಿಕ ಎಂ. ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಹೊರಬಂದ ಬಳಿಕ ‘ಮೆಟ್ರೋ ಪರಿಷ್ಕೃತ ದರವನ್ನು ಹಿಂಪಡೆಯಿರಿ’ ಎಂಬ ಆಗ್ರಹದ ಫಲಕ ಪ್ರದರ್ಶಿಸಿದರು.

    ದರ ಏರಿಕೆಯಾದ ನಂತರ ಗ್ರೀನ್ ಪೀಸ್ ಇಂಡಿಯಾ ಸಮೀಕ್ಷೆ ನಡೆಸಿತ್ತು. ದರ ಏರಿಕೆಯೂ ಒಂದು ಹೊತ್ತಿನ ಊಟಕ್ಕೆ ವ್ಯಯಿಸುವ ಖರ್ಚಿಗೆ ಸಮಾನವಾಗಿದೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ. 72.9 ರಷ್ಟು ಜನರು ಅಭಿಪ್ರಾಯ ತಿಳಿಸಿದ್ದರು.

    ಪ್ರಯಾಣ ದರ ಏರಿಕೆ ಬಳಿಕ ಬೆಂಗಳೂರು ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದ್ದು, ಬರೋಬ್ಬರಿ 2.3 ಲಕ್ಷ ಮಂದಿಯ ಓಡಾಟ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ. ದರ ಏರಿಕೆಯ ಮೊದಲು ಪ್ರತಿದಿನ ಸುಮಾರು 8.5 ಲಕ್ಷ ಪ್ರಯಾಣಿಕರು ನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ದರ ಏರಿಕೆ ಬಳಿಕ ಈ ಪ್ರಮಾಣ 6.3 ಲಕ್ಷಕ್ಕೆ ಇಳಿಕೆಯಾಗಿದೆ. ಆ ಮೂಲಕ ಬರೊಬ್ಬರಿ 2.3 ಲಕ್ಷ ಮಂದಿ ಓಡಾಟ ಇಳಿಕೆಯಾಗಿದೆ ಎಂದು ಬಿಎಂಆರ್‌ಸಿಎಲ್ ಮೂಲಗಳು ತಿಳಿಸಿವೆ. ಮೆಟ್ರೋ ದರ ಏರಿಕೆಯಿಂದ ಮೆಟ್ರೋದಲ್ಲಿ ಸಂಚರಿಸುವವರ ಸಂಖ್ಯೆ ಇಳಿಮುಖವಾಗಿದ್ದು, ತಮ್ಮ ಸ್ವಂತ ವಾಹನಗಳನ್ನು ಬಳಸುತ್ತಿರುವುದರಿಂದ ನಗರದಲ್ಲಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಹಾಗೂ ಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ ಎಂದು ಗ್ರೀನ್ ಪೀಸ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »