Karunadu Studio

ಕರ್ನಾಟಕ

ವಿಪರೀತ ಇಳಿಸಿಕೊಂಡ ಕರಣ್‌ ಜೋಹರ್‌ :ಕಾರಣ ಏನು ಗೊತ್ತಾ…?


ಮುಂಬೈ :

    ಕರಣ್ ಜೋಹರ್ ಅವರು ಇತ್ತೀಚೆಗೆ ಹೆಚ್ಚು ಚರ್ಚೆಯಲ್ಲಿ ಇದ್ದಾರೆ. ಅವರು ತಮ್ಮ ‘ಧರ್ಮ ಪ್ರೊಡಕ್ಷನ್ಸ್’ ನಿರ್ಮಾಣ ಸಂಸ್ಥೆಯ ಅರ್ಧದಷ್ಟು ಷೇರುಗಳನ್ನು ಮಾರಾಟ ಮಾಡಿದ್ದು ಇದಕ್ಕೆ ಕಾರಣ. ಇದೇ ವೇಳೆ ಅವರು ಸಾಕಷ್ಟು ಬಲಹೀನರಾಗಿ ಕಾಣಿಸಿಕೊಂಡಿದ್ದಾರೆ. ವಿಪರೀತ ತೂಕ ಕಳೆದುಕೊಂಡ ಅವರು ಸಣಕಲಾಗಿ ಹೋಗಿದ್ದಾರೆ. ಇದಕ್ಕೆ ಕಾರಣವೇನು? ಅವರಿಗೆ ಏನಾದರೂ ರೋಗ ಇದೆಯೇ ಎಂಬಿತ್ಯಾದಿ ಪ್ರಶ್ನೆಗಳು ಉದ್ಭವವ ಆಗಿದ್ದವು. ಇದಕ್ಕೆ ಕರಣ್ ಜೋಹರ್ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಇದನ್ನು ಅವರು ಆರೋಗ್ಯಕರ ಬೆಳವಣಿಗೆ ಎಂದೇ ಹೇಳಿದ್ದಾರೆ.

    ಕರಣ್ ಜೋಹರ್ ಅವರು ಇತ್ತೀಚೆಗೆ ಪಾಪರಾಜಿಗಳ ಕ್ಯಾಮೆರಾ ಎದುರು ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರ ಸಣಕಲು ದೇಹ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಕರಣ್ ಜೋಹರ್​ಗೆ ಯಾವುದೋ ಅನಾರೋಗ್ಯ ಸಮಸ್ಯೆ ಉಂಟಾಗಿದ್ದರಿಂದಲೇ ಅವರು ಈ ರೀತಿ ಆಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

   ‘ಐಫಾ ಡಿಜಿಟಲ್ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕರಣ್ ಜೋಹರ್ ಭಾಗಿ ಆಗಿದ್ದಾರೆ. ವಿಪರೀತಿ ತೂಕ ಕಳೆದುಕೊಳ್ಳಲು ಕಾರಣ ಏನು ಎಂದು ಅವರಿಗೆ ಕೇಳಲಾಗಿದೆ.  ‘ಇದು ಆರೋಗ್ಯಕರ. ಒಳ್ಳೆಯ ಊಟ ಮಾಡಬೇಕು, ವ್ಯಾಯಾಮ ಮಾಡಬೇಕು. ಉತ್ತಮವಾಗಿ ಕಾಣಲು ನಿಮ್ಮ ಕೈಲಾದಷ್ಟು ಪ್ರಯತ್ನಿಸಬೇಕು’ ಎಂದು ಅವರು ಹೇಳಿದ್ದಾರೆ. ‘ನಿಮ್ಮ ದಿನಚರಿ ಏನು’ ಎಂಬ ಪ್ರಶ್ನೆಯೂ ಕರಣ್ ಜೋಹರ್ ಅವರಿಗೆ ಕೇಳಲಾಗಿದೆ. ಇದಕ್ಕೆ ಅವರು ಉತ್ತರಿಸೋಕೆ ನಿರಾಕರಿಸಿದ್ದಾರೆ. ‘ಹಾಗೆ ಹೇಳಿದರೆ ಗುಟ್ಟು ರಟ್ಟಾಗಿಬಿಡುತ್ತದೆ’ ಎಂದು ಕರಣ್ ಜೋಹರ್ ಅವರು ಹೇಳಿಕೊಂಡಿದ್ದಾರೆ.

   ‘ಕುಚ್ ಕುಚ್ ಹೋತಾ ಹೇ’, ‘ಕಭಿ ಖುಷಿ ಕಭಿ ಗಮ್’, ‘ಮೈ ನೇಮ್ ಈಸ್ ಖಾನ್’ ರೀತಿಯ ಸಿನಿಮಾಗಳನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದಾರೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕರಣ್ ಜೋಹರ್ ನಿರ್ದೇಶನದ ಕೊನೆಯ ಸಿನಿಮಾ. ಅವರು ಹಲವು ಸೆಲೆಬ್ರಿಟಿ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸಿ ಫೇಮಸ್ ಆಗಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »