Karunadu Studio

ಕರ್ನಾಟಕ

ಬೆಂಗಳೂರಿನಲ್ಲಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ


ಬೆಂಗಳೂರು

     ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ  ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತ ಬಾಂಗ್ಲಾದೇಶ ಪ್ರಜೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದನು. ಪಶ್ಚಿಮ ಬಂಗಾಳದ ಮೆಲ್ಪಾ ಜಿಲ್ಲೆಯ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪ್ರಮಾಣ ಪತ್ರ ಪಡೆದಿದ್ದನು.

     ಬಳಿಕ, ಮೊಹಮ್ಮದ್ ಸಿದ್ಧಿಕ್ ಬೆಂಗಳೂರಿನ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ವಾಸವಿದ್ದನು. ಇಲ್ಲಿ, ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ಪಾಸ್​ಪೋರ್ಟ್, ವೋಟರ್​ಐಡಿ, ಪಾನ್ ಕಾರ್ಡ್ ಪಡೆದಿದ್ದಾಗಿ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಮೊಹಮ್ಮದ್ ಸಿದ್ಧಿಕ್ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಫಾರಿನರ್ಸ್ ಆಕ್ಟ್, BNS 336(3), 340(2), 339ರಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಮೊಹಮ್ಮದ್ ಸಿದ್ದಿಕ್ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿರುವ ಬಾಂಗ್ಲಾ ವಲಸಿಗರಿಂದ ಹಣ ಪಡೆದುಕೊಂಡು, ಭಾರತೀಯ ದಾಖಲಾತಿಗಳಾದ ಪಾಸ್​ಪೋರ್ಟ್​, ಪ್ಯಾನ್​ಕಾರ್ಡ್​ಗಳನ್ನು ಮಾಡಿಸಿಕೊಂಡಿದ್ದಾನೆ. ಈತನ ಜೊತೆಗೆ ಇನ್ನೂ 15-20 ಬಾಂಗ್ಲಾ ವಲಸಿಗರು ಜನ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಫ್​ಐಆರ್​ನಲ್ಲಿ ದಾಖಲಾಗಿದೆ. ಮೊಹಮ್ಮದ್ ಸಿದ್ದಿಕ್​ನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಬೆಂಗಳೂರು ನಗರದ ಥಣಿಸಂದ್ರದ ವ್ಯಕ್ತಿಯೊಬ್ಬರು ಪ್ಯಾನ್ ​ಕಾರ್ಡ್​, ವೋಟರ್​ ಐಡಿ ಗುರುತಿನ ಚೀಟಿಗಳನ್ನು ಮಾಡಿಸಿಕೊಟ್ಟಿದ್ದಾರೆ. ಮತ್ತು ಶಾಲೆಯ ವರ್ಗಾವಣೆ ಪತ್ರದ ಆಧಾರದ ಮೇಲೆ ಭಾರತದ ಪಾಸ್​ಪೋರ್ಟ್​ ಅನ್ನು ಏಜೆಂಟ್​ ಮಾಡಿಸಿಕೊಟ್ಟಿದ್ದಾರೆ ಎಂದು ಬಾಯಿಬಿಟ್ಟಿದ್ದಾನೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »