Karunadu Studio

ಕರ್ನಾಟಕ

ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದತಿಗೆ ಬಿಜೆಪಿ- ಜೆಡಿಎಸ್ ಆಗ್ರಹ


ಬೆಂಗಳೂರು:

   ಗ್ಯಾರಂಟಿ ಅನುಷ್ಠಾನ ಸಮಿತಿಗೆ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿರುವ ಕಾಂಗ್ರೆಸ್‌ ಸರ್ಕಾರದ ಅಸಂವಿಧಾನಿಕ ನಡೆಯನ್ನು ಖಂಡಿಸಿ ಮತ್ತು ಕಾನೂನುಬಾಹಿರವಾಗಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ದುರಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ನಿಯೋಗವು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.

   ದೂರು ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ವೈ. ವಿಜಯೇಂದ್ರ ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ, ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »