Karunadu Studio

ಕರ್ನಾಟಕ

ಜನರ ತೆರಿಗೆ ದುಡ್ಡನ್ನು ಸರ್ಕಾರ ಲೂಟಿ ಮಾಡುತ್ತಿದೆ : ವೇದವ್ಯಾಸ ಕಾಮತ್


ಮಂಗಳೂರು:

   ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ವಿವಾದಿತ ಜಿಲ್ಲಾ-ತಾಲೂಕು ಹುದ್ದೆಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದ್ದು ಆ ಮೂಲಕ ಜನರ ತೆರಿಗೆ ದುಡ್ಡನ್ನು ಸರ್ಕಾರ ಲೂಟಿ ಮಾಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

   ಸರ್ಕಾರದ ಗ್ಯಾರಂಟಿಗಳಿಗೆ ನಮ್ಮ ಯಾವುದೇ ವಿರೋಧವಿಲ್ಲ. ಮಹಿಳೆಯರಿಗೆ 2000ರ ಬದಲು 5000 ರೂಪಾಯಿ ನೀಡಲಿ, ಉಚಿತ 200 ಯೂನಿಟ್ ವಿದ್ಯುತ್ ಬದಲು 500 ಯೂನಿಟ್ ನೀಡಲಿ, 5ರ ಬದಲು 10 ಕೆಜಿ ಅಕ್ಕಿ ನೀಡಲಿ, ನಮ್ಮದೇನೂ ಅಭ್ಯಂತರವಿಲ್ಲ. ಆದರೆ ಈಗಾಗಲೇ ಆಡಳಿತ ವ್ಯವಸ್ಥೆಯಲ್ಲಿ ಅನೇಕಾರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಇರುವಾಗ “ಗ್ಯಾರಂಟಿ ಅನುಷ್ಠಾನ ಸಮಿತಿ” ರಚಿಸುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಪ್ರಮುಖ ಹುದ್ದೆ ಸೃಷ್ಟಿಸಿ ಸರ್ಕಾರದ ಬೊಕ್ಕಸದಿಂದಲೇ ಕೋಟ್ಯಂತರ ರೂಪಾಯಿ ವೇತನ ನೀಡುವುದು ಅಧಿಕಾರದ ದುರುಪಯೋಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

   ರಾಜ್ಯದ ನಾಲ್ಕು ಲಕ್ಷ ಕೋಟಿ ಬಜೆಟ್ ಅನುಷ್ಠಾಕ್ಕೂ ಇಲ್ಲದ “ವಿಶೇಷ ಸಮಿತಿ”, ಐವತ್ತು ಸಾವಿರ ಕೋಟಿಯ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಯಾಕೆ ಬೇಕು? ಡಿಸಿಎಂ ಅವರಂತೂ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರಿಗೆ ಲಾಭ ಮಾಡಿಕೊಟ್ಟರೆ ಏನು ತಪ್ಪು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದಲೇ ಅವರಿಗೆ ಎಷ್ಟು ಬೇಕಾದರೂ ವೇತನವನ್ನು ಕೊಡಲಿ. ಅದು ಬಿಟ್ಟು ರಾಜ್ಯದ ಜನರ ಶ್ರಮದ ದುಡ್ದು ಲೂಟಿ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ, ಕೂಡಲೇ ಇದನ್ನು ರದ್ದು ಮಾಡಬೇಕೆಂದು ಆಗ್ರಹಿಸಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »