Karunadu Studio

ಕರ್ನಾಟಕ

IND vs ENG Test Series: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ರೋಹಿತ್‌ ನಾಯಕ!


ಮುಂಬಯಿ: 

    ಚಾಂಪಿಯನ್ಸ್‌ ಟ್ರೋಫಿ ಗೆಲುವಿನ ಬಳಿಕ ನಿವೃತ್ತಿಯ ವದಂತಿಗಳನ್ನು ತಳ್ಳಿಹಾಕಿದ ರೋಹಿತ್‌ ಶರ್ಮ ಅವರು 2027 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವರೆಗೆ ತಮ್ಮ ಕ್ರಿಕೆಟ್‌ ವೃತ್ತಿಜೀವನವನ್ನು ವಿಸ್ತರಿಸುವ ಯೋಜನೆಯಲ್ಲಿದ್ದಾರೆ. ಜತೆಗೆ ಟೆಸ್ಟ್ ಕ್ರಿಕೆಟ್ ಆಡುವುದನ್ನು ಕೂಡ ಮುಂದುವರಿಸಲಿದ್ದು ಜೂನ್‌ನಲ್ಲಿ ನಡೆಯುವ ಇಂಗ್ಲೆಂಡ್‌ ಟೆಸ್ಟ್‌ ಸರಣಿಯಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ರೋಹಿತ್‌ ಇನ್ನೂ ಕೆಲ ಕಾಲ ಭಾರತ ಪರ ನಾಯಕನಾಗಿ ಆಡಬೇಕೆಂದು ಬಿಸಿಸಿಐ ಕೂಡ ಬಯಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

    ‘ರೋಹಿತ್‌ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ತಂಡವನ್ನು ಮುನ್ನಡೆಸಲು ಅವರು ಸರಿಯಾದ ಆಯ್ಕೆ. ರೋಹಿತ್ ಕೂಡ ರೆಡ್-ಬಾಲ್ ಕ್ರಿಕೆಟ್ ಆಡುವುದನ್ನು ಮುಂದುವರಿಸುವ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ’ ಎಂದು ಬಿಸಿಸಿಐ ಮೂಲಗು ತಿಳಿಸಿರುುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

    ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಸರಣಿ ಸೋಲುಗಳು ಮತ್ತು ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದ ಕಾರಣ ರೋಹಿತ್‌ ಚಾಂಪಿಯನ್ಸ್‌ ಟ್ರೋಫಿ ಬಳಿಕ ನಿವೃತ್ತಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ರೋಹಿತ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅಜೇಯವಾಗಿ ತಂಡವನ್ನು ಫೈನಲ್‌ ತಲುಪಿಸಿ ತಂಡವನ್ನು ಚಾಂಪಿಯನ್‌ ಮಾಡಿದ್ದರು. ಅಲ್ಲದೆ ಫೈನಲ್‌ನಲ್ಲಿ 76 ರನ್‌ ಬಾರಿಸಿ ತಂಡದ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಬಿಸಿಸಿಐಗೂ ಕೂಡ ರೋಹಿತ್‌ ಅವರನ್ನು ಕೆಲ ಕಾಲ ತಂಡದಲ್ಲಿ ಮುಂದುವರಿಸುವ ಯೋಜನೆಯಲ್ಲಿದೆ. ಒಂದೊಮ್ಮೆ ರೋಹಿತ್‌ ಟೆಸ್ಟ್‌ ನಾಯಕತ್ವ ತ್ಯಜಿಸಿದರೂ ಏಕದಿನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿ ಜೂನ್‌ 20 ರಿಂದ ಆಗಸ್ಟ್‌ 4ರ ತನಕ ನಡೆಯಲಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »