Karunadu Studio

ಕರ್ನಾಟಕ

ವೇತನ ಕಡಿತ : T20 ಸರಣಿಯಿಂದ ಹಿಂದೆ ಸರಿದ ಪಾಕ್‌ ಆಟಗಾರರು ….!


ಪಾಕಿಸ್ತಾನ :

    ಪಾಕಿಸ್ತಾನ್ ತಂಡದ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ನಸೀಮ್ ಶಾ ಮುಂಬರುವ ನ್ಯಾಷನಲ್​ ಟಿ20 ಚಾಂಪಿಯನ್​ಶಿಪ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಪಾಕಿಸ್ತಾನದ ದೇಶೀಯ ಟಿ20 ಟೂರ್ನಿಯಾಗಿರುವ ಈ ಪಂದ್ಯಾವಳಿಯಿಂದ ಪ್ರಮುಖ ಆಟಗಾರರು ಹೊರಗುಳಿಯಲು ಮುಖ್ಯ ಕಾರಣ ವೇತನ ಕಡಿತ ಎಂದು ತಿಳಿದು ಬಂದಿದೆ.

     ಕೆಲ ದಿನಗಳ ಹಿಂದೆಯಷ್ಟೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತನ್ನ ದೇಶೀಯ ಟೂರ್ನಿ ನ್ಯಾಷನಲ್ ಕಪ್​ನಲ್ಲಿ ಕಣಕ್ಕಿಳಿಯುವ ಆಟಗಾರರ ವೇತನವನ್ನು ಶೇ. 75 ರಷ್ಟು ಕಡಿತ ಮಾಡಿದೆ. ಈ ಹಿಂದೆ ಆಟಗಾರರಿಗೆ ಪಂದ್ಯ ಶುಲ್ಕವಾಗಿ 40,000 ರೂ. (PKR) ನೀಡಲಾಗುತ್ತಿತ್ತು.ಆದರೆ ಈ ಬಾರಿಯಿಂದ ಈ ಟೂರ್ನಿಯಲ್ಲಿ ಕಣಕ್ಕಿಳಿಯುವ ಆಟಗಾರರಿಗೆ 10,000 ರೂ. ಪಂದ್ಯ ಶುಲ್ಕ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಲ್ಲೇ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ನಸೀಮ್ ಶಾ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

     ನ್ಯೂಝಿಲೆಂಡ್‌ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಿಂದ ಈ ಮೂವರನ್ನು ಕೈ ಬಿಡಲಾಗಿತ್ತು. ಹೀಗಾಗಿ ಬಾಬರ್, ರಿಝ್ವಾನ್ ಹಾಗೂ ನಸೀಮ್ ಶಾ ದೇಶೀಯ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

   ಆದರೀಗ ರಾಷ್ಟ್ರೀಯ ತಂಡದಿಂದ ಹೊರಬಿದ್ದರೂ ಈ ಮೂವರು ಆಟಗಾರರು ನ್ಯಾಷನಲ್​ ಟಿ20 ಚಾಂಪಿಯನ್​ಶಿಪ್ ಆಡಲು ಹಿಂದೇಟು ಹಾಕಿರುವುದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಚಿಂತೆ ಹೆಚ್ಚಿಸಿದೆ.ಇನ್ನು ಈ ಬಾರಿಯ ನ್ಯಾಷನಲ್ ಟಿ20 ಚಾಂಪಿಯನ್​ಶಿಪ್ ಟೂರ್ನಿಯು ಫೈಸಲಾಬಾದ್, ಲಾಹೋರ್ ಮತ್ತು ಮುಲ್ತಾನ್ ನಗರಗಳಲ್ಲಿ ನಡೆಯಲಿದ್ದು, ಒಟ್ಟು 39 ಪಂದ್ಯಗಳನ್ನು ಆಡಲಾಗುತ್ತದೆ. ಅಲ್ಲದೆ ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 27 ರಂದು ಫೈಸಲಾಬಾದ್‌ನಲ್ಲಿ ನಡೆಯಲಿದೆ. 

   ಇತ್ತ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಆಟಗಾರರ ವೇತನ ಕಡಿತಗೊಳಿಸಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ, ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ತಂಡದ ಆಟಗಾರರ ವೇತನಕ್ಕೂ ಕತ್ತರಿ ಹಾಕುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »