Karunadu Studio

ಕರ್ನಾಟಕ

ಬಳ್ಳಾರಿಯಲ್ಲಿ ಬಿಸಿ ಗಾಳಿ: ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ


ಬಳ್ಳಾರಿ : 

    ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ಧಗೆ ಹೆಚ್ಚಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿಯೂ ಉಷ್ಣಾಂಶ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸುತ್ತಿದೆ. ಜನರು ಈ ಸಮಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದ್ದಾರೆ. ಜನರು ಅನುಸರಿಸಬೇಕಾದ ಕ್ರಮಗಳ ಕುರಿತು ಸಲಹೆಗಳನ್ನು ಸಹ ನೀಡಲಾಗಿದೆ.

   ಬಳ್ಳಾರಿ ಜಿಲ್ಲಾಡಳಿತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.

    ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, “ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತಾ ಕ್ರಮ ವಹಿಸಬೇಕು” ಎಂದು ಕರೆ ಕೊಟ್ಟಿದ್ದಾರೆ.

   ಏನು ಮಾಡಬೇಕು? * ಸಾರ್ವಜನಿಕರು ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು. * ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. * ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು. * ಬಿಸಿಲಿನಲ್ಲಿ ಹೋಗುವಾದ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು.

   * ಹೊರಗೆ ಹೋಗಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ. * ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ.

   * ಪ್ರಾಣಿ-ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಿ. * ಆದಷ್ಟು ಫ್ಯಾನ್ಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ. * ಕೆಲಸವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಉತ್ತಮ ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಇರಿಸಿಕೊಳ್ಳಬೇಕು. * ಕೆಲಸ ನಿರ್ವಹಿಸುವ ಗರ್ಭಿಣಿಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. * ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗೃತೆ ವಹಿಸಬೇಕು.

   ಏನು ಮಾಡಬಾರದು * ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ ಮತ್ತು ಅವುಗಳಿಗೆ ಅಪಾಯಕಾರಿಯಾಗಬಹುದು. * ಕಪ್ಪುಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ. 



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »