Karunadu Studio

ಕರ್ನಾಟಕ

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಗುಲಾಬಿಗಳನ್ನು ಕೊಡುವ ಮೂಲಕ ಧೈರ್ಯ ತುಂಬುವ ಕೆಲಸವನ್ನು ಮಾಡಿದ ರೈತ ಸಂಘ


ನಾಯಕನಹಟ್ಟಿ :

     ಪಟ್ಟಣದ ಮಯೂರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಎಸ್.ಎಸ್.ಎಲ್. ಸಿ. ಪರೀಕ್ಷೆಯ ಮೊದಲ ದಿನದಂದು

      ಪರೀಕ್ಷಾರ್ಥಿ ವಿದ್ಯಾರ್ಥಿಗಳನ್ನು ಉರಿದುಂಬಿಸುವ ಸಲುವಾಗಿ ಶುಭಾಶಯಗಳನ್ನು ಕೋರುತ್ತಾ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ ಮೇಟಿ ಬಣದ ನಾಯಕನಹಟ್ಟಿ ಹೋಬಳಿ ಘಟಕದ ಅಧ್ಯಕ್ಷರಾದಂತಹ ಡಾ ನಾಗರಾಜ್ ಮೀಸೆರವರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಮ್ಮುಖದಲ್ಲಿ ಶುಕ್ರವಾರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಗುಲಾಬಿಗಳನ್ನು ಕೊಡುವ ಮೂಲಕ ಧೈರ್ಯ ತುಂಬುವ ಕೆಲಸವನ್ನು ಮಾಡಿದರು.

     ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಾಗರಾಜ್ ಮೀಸೆ ಅವರು ವಿದ್ಯಾರ್ಥಿಗಳು ಯಾವುದೇ ಒತ್ತಡ ಹಾಗೂ ಆತಂಕಕ್ಕೆ ಒಳಪಡದೆ ಮನಸ್ಸನ್ನು ಶಾಂತ ಚಿತ್ತದಿಂದ ಇರಿಸಿಕೊಂಡು ಗಾಬರಿಗೆ ಒಳಪಡದೆ ನೀವು ಓದಿದ ವಿಷಯಗಳ ಬಗ್ಗೆ ಗಮನ ಆರಿಸಿ ಪರೀಕ್ಷೆಯನ್ನು ಎದುರಿಸಬೇಕಾಗಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿದರು.

      ಅದರಂತೆ ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿ. ಎಸ್.ಐ. ದೇವರಾಜ್ ಮಾತನಾಡಿ ವಿದ್ಯಾರ್ಥಿಗಳು ಯಾವುದೇ ಗೊಂದಲ ಇಲ್ಲದೆ ಮೊದಲು ಪ್ರಶ್ನೆಗಳನ್ನೇಲ್ಲ ಓದಿಕೊಂಡು ನಿಮಗೆ ತೋಚಿದ್ದನ್ನು ಬರೆಯುವಂತೆ ಕಿವಿಮಾತು ಹೇಳಿದರು.

     ಅದರಂತೆ ಮಯೂರ ಇಂಟರ್ನ್ಯಾಷನಲ್ ಸ್ಕೂಲ್ ಕಾರ್ಯದರ್ಶಿಯಾದಂತಹ ಡಿ ಮೈಲಾರ ಸ್ವಾಮಿ ಅವರು ಮಾತನಾಡಿ ನಮ್ಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿದ್ದೇವೆ ಎಂದು ಹೇಳಿದರು.

     ಈ ಸಂದರ್ಭದಲ್ಲಿ ಡಾನ್ ಬಾಸ್ಕ್ ಶಾಲೆಯ ಕಾರ್ಯದರ್ಶಿಯಾದಂತಹ ಕಾರ್ಯದರ್ಶಿಯ ಬೋರ ಸ್ವಾಮಿ ದಲಿತ ಮುಖಂಡರಾದ ಎನ್ ನಿರಂಜನ್ ನಾಯಕನಹಟ್ಟಿ ಪಟ್ಟಣ ದ ಘಟಕದ ಉಪಾಧ್ಯಕ್ಷ ಎಸ್ ರಾಘವೇಂದ್ರ. ಶಿಕ್ಷಕರಾದ ಜಯಣ್ಣ .ಹಾಗೂ ಪೊಲೀಸ್ ಸಿಬ್ಬಂದಿಯವರು ಇದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »