ನಾಯಕನಹಟ್ಟಿ :
ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರ ಎನ್ ವೈ ಗೋಪಾಲಕೃಷ್ಣ ರವರು ಜಾತ್ರೆಯ ಪ್ರಯುಕ್ತ ಕುಡಿಯುವ ನೀರಿಗಾಗಿ ಆರು ಬೋರ್ವೆಲ್ ಗಳನ್ನು ಕೊರಿಸಿದರು.ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಹೇಳಿದರು.
ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾಕ್ಟರ್ ವಾಸುದೇವಿ ಮೇಟಿ ಬಣದ ವತಿಯಿಂದ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಆದ ಮಂಜುಳಾ ಶ್ರೀಕಾಂತ್ ಹಾಗೂ ಉಪಾಧ್ಯಕ್ಷರು ಸರ್ವ ಮಂಗಳ ಉಮಾಪತಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿಗಳು ಆದ ಓ. ಶ್ರೀನಿವಾಸ್ ಪಿ. ಎಸ್. ಐ. ದೇವರಾಜ್ ರವರಿಗೆ ಇವರೆಲ್ಲರೂ ಮೊದಲ ಪ್ರಯತ್ನದಲ್ಲೇ ಜಾತ್ರಾ ಮಹೋತ್ಸವವನ್ನು ಹಾಗೂ ಮರಿ ಪರೀಷೆ ಯನ್ನು ಅತಿ ಯಶಸ್ವಿಯಾಗಿ ಮುಕ್ತಾಯಗೊಳಿಸಿದ್ದಕ್ಕಾಗಿ ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಅವರು ರಸ್ತೆಗಳ ಅಭಿವೃದ್ಧಿಗೆ ಒಂದು ಕೋಟಿ ರೂಪಾಯಿಯನ್ನು ಅನುದಾನವನ್ನು ನೀಡಿದರು. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಯಾವುದೇ ಗೊಂದಲವಿಲ್ಲದೆ
ಯಶಸ್ವಿಯಾಗಿ ನಡೆಯಲು ಪೊಲೀಸ್ ಇಲಾಖೆಯವರು ಮುಖ್ಯ ಪಾತ್ರ ವಹಿಸುತ್ತಾರೆ ಎಂದರು. ಹಾಗೂ ನಿಮ್ಮೆಲ್ಲರ ಸಹಕಾರದಿಂದ ಜಾತ್ರೆ ಯಶಸ್ವಿಗೊಳಿಸಿದ್ದೇವೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾಕ್ಟರ್ ವಾಸುದೇವಿ ಮೇಟಿ ಬಣದ ಹೋಬಳಿ ಅಧ್ಯಕ್ಷ ನಾಗರಾಜ್ ಮೀಸೆ ಮಾತನಾಡಿ
ಮಾರ್ಚ್ 16 ರಂದು ನಡೆದ ಐತಿಹಾಸಿಕ ಪವಾಡಪುರುಷ ಮಾಡಿದಷ್ಟು ನೀಡು ಭಿಕ್ಷೆ ಎಂಬ ವಚನ ನುಡಿದಿರುವ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವವನ್ನು ಯಾವುದೇ ಅಹಿತಕರ ಘಟನೆಗಳು ನಡೆಯದ ಹಾಗೆ ಜಾತ್ರೆಗೆ ಆಗಮಿಸಿದಂತ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ವಿದ್ಯುತ್ ದೀಪ. ಸಿ ಸಿ ಕ್ಯಾಮೆರಾ ಗಳನ್ನು ಅಳವಡಿಸಿದಂತಹ ಪೊಲೀಸ್ ಅಧಿಕಾರಿಗಳು ಪಟ್ಟಣ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವಿ ಮೇಟಿ ಬಣದ ನಾಯಕನಹಟ್ಟಿ ಹೋಬಳಿ ಆರೋಗ್ಯ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆ. ಪೊಲೀಸ್ ಇಲಾಖೆ
ಧಾರ್ಮಿಕ ದತ್ತಿ ಇಲಾಖೆಯವರು. ಹಾಗೂ ನಮ್ಮ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಎನ್ ವೈ ಗೋಪಾಲಕೃಷ್ಣ ಸಾಹೇಬರು. ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಪೌರಕಾರ್ಮಿಕರು ಸಂಬಂಧಪಟ್ಟಂತಹ ಎಲ್ಲಾ ಇಲಾಖೆಯವರು ಸೇರಿ ನಮ್ಮ ಜಾತ್ರೆಯನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇವೆ ಎಂದು ಹೇಳಿದರು.
ಅದರಂತೆ ನಾಯಕನಹಟ್ಟಿ ಪೊಲೀಸ್ ಠಾಣಾ ಪಿಎಸ್ಐ ದೇವರಾಜ್ ಮಾತನಾಡಿ ನಾವು ಕೆಲಸ ಮಾಡುವುದು ಮುಖ್ಯವಲ್ಲ ಆ ಕೆಲಸವನ್ನು ಗುರುತಿಸಿ ಪ್ರಶಂಸೆಗೊಳಿಸಿದಾಗ
ನಮಗೆ ಇನ್ನೂ ಹೆಚ್ಚು ಕೆಲಸ ಮಾಡುವ ಹುಮ್ಮಸ್ಸು ಬರುತ್ತದೆ ಎಂದರು ನಮ್ಮೆಲ್ಲರಿಗೂ ಸನ್ಮಾನ ಮಾಡಿದಂತಹ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ ವಾಸುದೇವ ಮೇಟಿ ಬಣದ ಅಧ್ಯಕ್ಷರಿಗೂ ಹಾಗೂ ಸರ್ವ ಸದಸ್ಯರಿಗೂ ಹೃತ್ಪೂರ್ವಕ ಧನ್ಯವಾದಗಳು ತಿಳಿಸಿದರು. ಈ ಸಂದರ್ಭದಲ್ಲಿ ಭಾಗವಹಿಸಿದಂತಹ ಜಿಲ್ಲಾ ಕಾರ್ಯದರ್ಶಿ ನವೀನ ಮದಕರಿ. ನಗರ ಘಟಕ ಉಪಾಧ್ಯಕ್ಷ ಸಿಎಸ್ ರಾಘವೇಂದ್ರ. ನಾಯಕನಹಟ್ಟಿ ಹೋಬಳಿ ಕಾರ್ಯದರ್ಶಿ ಮಂಜುನಾಥ್ ಕೆ ಎಂ. ಸಂಘಟನಾ ಕಾರ್ಯದರ್ಶಿ ಎಂ ಶಿವಮೂರ್ತಿ. ಪ್ರಚಾರ ಸಮಿತಿಯ ಅಧ್ಯಕ್ಷ ಟಿ. ಟಿ.ಹರೀಶ್ ಹಾಗೂ ಗಜ್ಜು ಗಾನಹಳ್ಳಿ ಗ್ರಾಮ ಘಟಕದ ಅಧ್ಯಕ್ಷ ಓಬಯ್ಯ ಬಿ. ಯವರು ಭಾಗವಹಿಸಿದ್ದರು.