Karunadu Studio

ಕರ್ನಾಟಕ

ನ್ಯಾ.ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿಗೆ ಸಚಿವ ಸಂಪುಟ ಒಪ್ಪಿಗೆ….!


ಬೆಂಗಳೂರು:

   ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗವು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದೆ.

   ಗುರುವಾರ ರಾಜ್ಯ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಗೆ ಒಪ್ಪಿಗೆ ಸೂಚಿಸಲಾಗಿದೆ.ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳಸಚಿವ ಎಚ್.ಕೆ.ಪಾಟೀಲ್ ಅವರು, ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಗೆ ಒಪ್ಪಿಗೆ ಸೂಚಿಸಲಾಗಿದ್ದು, ಮಧ್ಯಂತರ ವರದಿಯ ಶಿಫಾರಸಿನಂತೆ ತಂತ್ರಜ್ಞಾನ ಬಳಸಿ ಮುಂದಿನ 40 ದಿನಗಳೊಳಗೆ ಉಪ ಜಾತಿಗಳ ಸಮೀಕ್ಷೆ ನಡೆಸುವುದು, ಅದರ ಹೊಣೆಯನ್ನು ಹಾಲಿ ಇರುವ ಆಯೋಗಕ್ಕೆ ವಹಿಸುವುದಕ್ಕೂ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

    ನಾಲ್ಕು ಪ್ರಮುಖ ಶಿಫಾರಸು ಗಳನ್ನು ಮಾಡಿದ್ದು, ಅವುಗಳ ಅನುಷ್ಠಾನಕ್ಕೂ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಮುಖವಾಗಿ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿನ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಬೇಕಿದ್ದು, ಅದಕ್ಕಾಗಿ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು ಎಂದು ಮಧ್ಯಂತರ ವರದಿಯಲ್ಲಿ ತಿಳಿಸಲಾಗಿದೆ. ಈ ಸಮೀಕ್ಷೆಯನ್ನು ತಂತ್ರಜ್ಞಾನ ಬಳಸಿ 30ರಿಂದ 40 ದಿನಗಳೊಳಗೆ ಹೊಸಸಮೀಕ್ಷೆ ನಡೆಸಬಹುದು ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

   ಜತೆಗೆ ಹೊಸದಾಗಿ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ಧಪಡಿಸಬೇಕು. ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸುವುದು ಸೂಕ್ತವೆಂದು ವರದಿಯಲ್ಲಿ ತಿಳಿಸಲಾಗಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ನಿಗದಿ ಮಾಡುವ ಮಾನದಂಡಗಳಂತೆ ಉಪ ಜಾತಿಗಳನ್ನು ವರ್ಗೀಕರಣಗೊಳಿಸಿ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡುವಂತೆ ಮಧ್ಯಂತರ ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನ್ಯಾ.ನಾಗಮೋಹನದಾಸ್ ಸಮಿತಿಗೆ ವಹಿಸಲು ಹಾಗೂ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಆಯೋಗದ ಅವಧಿಯನ್ನು 60 ದಿನಗಳ (2 ತಿಂಗಳು)ವರೆಗೆ ವಿಸ್ತರಿಸಲು ನಿರ್ಣಯಿಸಲಾಗಿದೆ ಎಂದು ಹೇಳಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »