ಮುಂಬೈ :
ನಟ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ವಿಶೇಷ ವಾಚ್ ಧರಿಸಿ ಪೋಸ್ ಕೊಟ್ಟಿದ್ದರು. ಈ ವಾಚ್ ‘ರಾಮ ಜನ್ಮಭೂಮಿ ಎಡಿಷನ್’ ವಾಚ್ ಆಗಿತ್ತು. ಇದು ಅನೇಕರ ಕಣ್ಣು ಕುಕ್ಕಿದೆ. ಮುಸ್ಲಿಂ ಸಮುದಾಯದ ಧರ್ಮ ಗುರುಗಳು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಸಲ್ಮಾನ್ ಖಾನ್ ‘ಹರಾಮ್’ ಮಾಡಿದ್ದಾರೆ ಎಂದು ದೂರಿದ್ದಾರೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಜೋರಾಗುತ್ತಿವೆ. ಅವರು ಕ್ಷಮೆ ಕೇಳಬೇಕು ಎನ್ನುವ ಆಗ್ರಹವೂ ವ್ಯಕ್ತವಾಗಿದೆ.
ಸಲ್ಮಾನ್ ಖಾನ್ ಅವರು ಮುಸ್ಲಿಂ ಸಮುದಾಯಕ್ಕೆ ಸೇರದವರಾಗಿರಬಹುದು, ಆದರೆ, ಅವರು ಎಲ್ಲಾ ಧರ್ಮದವರನ್ನು ಗೌರವಿಸುತ್ತಾರೆ. ಸಿನಿಮಾಗಳಲ್ಲಿ ಭಜರಂಗಿ ಪಾತ್ರವನ್ನು ಅವರು ಮಾಡುತ್ತಾರೆ. ಅದೇ ರೀತಿ ನಿಜ ಜೀವನದಲ್ಲೂ ಅವರು ಎಲ್ಲಾ ದೇವರುಗಳನ್ನು ಸಮಾನವಾಗಿ ಕಾಣುತ್ತಾರೆ. ಇದೇ ಮನಸ್ಥಿತಿಯಲ್ಲಿ ಅವರು ರಾಮ ಜನ್ಮಭೂಮಿ ದೇವಾಲಯ ಇರುವ ವಾಚ್ ಧರಿಸಿದ್ದಕ್ಕೆ ಟೀಕೆ ಎದುರಿಸಬೇಕಾಗಿದೆ.
‘ಸಲ್ಮಾನ್ ಖಾನ್ ಅವರು ರಾಮ ಮಂದಿರದ ಪ್ರಚಾರಕ್ಕಾಗಿ ತಯಾರಿಸಿದ ರಾಮ ಮಂದಿರ ಆವೃತ್ತಿಯ ವಾಚ್ ಧರಿಸಿದ್ದಾರೆ. ಮುಸ್ಲಿಂ ಆಗಿರುವಾಗ ಕೈಯಲ್ಲಿ ಅಂತಹ ಗಡಿಯಾರವನ್ನು ಧರಿಸುವುದು ಹರಾಮ್’ ಎಂದು ಆಲ್ ಇಂಡಿಯಾ ಮುಸ್ಲಿಂ ಜಮಾತ್ನ ಮೌಲಾನಾ ಶಹಾಬುದ್ದೀನ್ ರಾಜ್ವಿ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.