Karunadu Studio

ಕರ್ನಾಟಕ

ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಮತಗಳೆಷ್ಟು ಬೇಕು?


ನವದೆಹಲಿ:

   ವಕ್ಫ್‌ ಮಸೂದೆ ಮಂಡನೆಗೆ  ಕ್ಷಣಗಣನೆ ಶುರುವಾಗಿದೆ. ಇತ್ತ ವಕ್ಫ್‌ ಮಸೂದೆ ಮಂಡನೆಗೆ ಕೇಂದ್ರ ಕೇಂದ್ರ ಸರ್ಕಾರ ಸಕಲ ರೀತಿಯ ತಯಾರಿ ನಡೆಸುತ್ತಿದ್ದಂತೆ ಮತ್ತೊಂದೆಡೆ ಮೋದಿ ಸರ್ಕಾರವನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ರಣತಂತ್ರ ರೂಪಿಸಿ ಸಂಸತ್‌ನಲ್ಲಿ ಕೋಲಾಹಲ ಸೃಷ್ಟಿಗೆ ಸಜ್ಜಾಗಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದು ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಡೆಯಷ್ಟೇ ಸೂಕ್ಷ್ಮವಾದ ಮತ್ತು ಕೋಲಾಹಲವನ್ನೇ ಸೃಷ್ಟಿಸಿರುವ ಸಂಗತಿಯಾಗಿರುವ ವಕ್ಫ್‌ ತಿದ್ದುಪಡಿ ಮಸೂದೆಗೆ ವಿವಿಧ ಪಕ್ಷಗಳ ಪರ-ವಿರೋಧ ನಡೆ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌ 

   ಸಂಸತ್‌ನಲ್ಲಿ ಒಂದು ಮಸೂದೆ ಅಂಗೀಕರಿಸಲು ಅದಕ್ಕೆ 272 ಮತಗಳ ಅಗತ್ಯವಿದೆ. ಲೋಕಸಭೆಯಲ್ಲಿ ಈಗಾಗಲೇ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ 293 ಸ್ಪಷ್ಟ ಬಹುಮತ ಹೊಂದಿದೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಸಂಸದರಲ್ಲಿ ಬಿಜೆಪಿ 240 ಸದಸ್ಯರನ್ನು ಹೊಂದಿದ್ದು, ಮಿತ್ರಪಕ್ಷಗಳಿಗೆ ಬೆಂಬಲ ಸಿಗುವ ವಿಶ್ವಾಸ ಹೊಂದಿದೆ. ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ (ಟಿಡಿಪಿ)ದಿಂದ 16, ಜೆಡಿಯು ಪಕ್ಷದಿಂದ 12, ಶಿವಸೇನೆಯಿಂದ 7, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ದಿಂದ 5, ಮತ್ತು ಆರ್‌ಎಲ್‌ಡಿ, ಜೆಡಿಎಸ್, ಜೆಎಸ್‌ಪಿ, ಇತರ 7 ಪಕ್ಷಗಳಿಂದ ತಲಾ ಇಬ್ಬರು ಸದಸ್ಯರನ್ನು ಹೊಂದಿದೆ. ಮತ್ತೊಂದೆಡೆ ನಿತೀಶ್ ಕುಮಾರ್ ಅವರ ಜೆಡಿಯು ಕೂಡ ಮಸೂದೆಗೆ ತನ್ನ ಬೆಂಬಲವನ್ನು ಸೂಚಿಸಿದೆ. 

   ಇನ್ನು ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟ ವಕ್ಫ್‌ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದು ಅಸಂವಿಧಾನಿಕ ಮತ್ತು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ಹಾನಿಕಾರಕ ಎಂದು ಖಂಡತುಂಡವಾಗಿ ಸರ್ಕಾರದ ನಡೆಯನ್ನು ವಿರೋಧಿಸಿವೆ. ಹಾಗಾದರೆ ಮಸೂದೆಗೆ ಯಾವ ಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ ಮತ್ತು ಅವುಗಳ ಸಂಖ್ಯಾ ಬಲ ಎಷ್ಟು ಎಂಬುದನ್ನು ನೋಡೋಣ. ಲೋಕಸಭೆಯಲ್ಲಿ ಕಾಂಗ್ರೆಸ್, 99 ಸ್ಥಾನಗಳನ್ನು ಹೊಂದಿದ್ದು, ಸಮಾಜವಾದಿ ಪಕ್ಷ – 37, ಟಿಎಂಸಿ – 28, ಡಿಎಂಕೆ – 22, ಶಿವಸೇನೆ (ಯುಬಿಟಿ) – 9, ಎನ್‌ಸಿಪಿ-ಎಸ್‌ಪಿ – 8, ಸಿಪಿಐಎಂ – 4, ಆರ್‌ಜೆಡಿ – 4, ಎಎಪಿ – 3, ಜೆಎಂಎಂ – 3, ಐಯುಎಂಎಲ್ – 3, ಮತ್ತು ಜೆಕೆ ನ್ಯಾಷನಲ್ ಕಾನ್ಫರೆನ್ಸ್ – 2, ಮತ್ತು ಇತರ 13 ಸ್ಥಾನಗಳನ್ನು ಹೊಂದಿದೆ. ಇನ್ನು ಇಂಡಿ ಬಣದಲ್ಲಿಲ್ಲದಿದ್ದರೂ ಎಐಎಂಐಎಂನ ಏಕೈಕ ಸಂಸದ ಅಸಾದುದ್ದೀನ್ ಓವೈಸಿ ಕೂಡ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಒಟ್ಟು 236 ಸ್ಥಾನಗಳನ್ನು ಹೊಂದಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »