ರಾಯಚೂರು:
ಪೊಲೀಸರ ಥಳಿತದಿಂದ ಯುವಕ ವೀರೇಶ ಎಂಬುವರು ಆರೋಪದ ಹಿನ್ನೆಲೆಯ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ಅವರು ನಗರದ ಪಶ್ಚಿಮ ಪೊಲೀಸ್ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿ ಆದೇಶ ಹೊರಡಿಸಿದ್ದಾರೆ.
ಕೌಟುಂಬಿಕ ಕಲಹದ ಲಿನ್ ನೆಲೆಯಲ್ಲಿ ವಿಚಾರಣೆ ವೇಳೆ ವೀರೇಶ ಎಂಬುವ ಯುವಕನನ್ನು ಪೊಲೀಸರ ಥಳಿತದಿಂದ ಯುವಕ ಸಾವನ್ನಪ್ಪಿದ್ದಾನೆ. ನಗರದ ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಪಿಐ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ರಾತ್ರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಮೃತನ ಕುಟುಂಬದ ಸದಸ್ಯರು, ಶಾಸಕರ ಬೆಂಬಲಿಗರು, ಪ್ರತಿಭಟನೆ ನಡೆಸಿದರು.