Karunadu Studio

ಕರ್ನಾಟಕ

ಅಂಬೇಡ್ಕರ್ ಜಯಂತಿ ಅಂಗವಾಗಿ ಪರಮೇಶ್ವರ್ ಕಪ್ 2025 ಆಯೋಜನೆ


ಕೊರಟಗೆರೆ-

     ಕೊರಟಗೆರೆ ಪಟ್ಟಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತಿ ಅಂಗವಾಗಿ ಪರಮೇಶ್ವರ್ ಕಪ್- 2025 ಬೃಹತ್ ರಾಜ್ಯಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮತ್ತು ಪಟ್ಟಣ ಪಂಚಾಯ್ತಿ ಸದಸ್ಯ ನಂದೀಶ್ ತಿಳಿಸಿದರು.

    ಅವರು ಪಟ್ಟಣದ ರಾಜೀವ ಭವನದಲ್ಲಿ ನಡೆದ ಪತ್ರಿಕಾ ಘೋಷ್ಟಿಯಲ್ಲಿ ಮಾತನಾಡಿ ಕೊರಟಗೆರೆ ತಾಲ್ಲೂಕಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂತಹ ಬೃಹತ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಏಪ್ರಿಲ್ ೦4, ೦5, ೦6 ನೇ ತಾರೀಕಿನೊಂದು ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿವೆ, ಎಲ್ಲಾ ಪಂದ್ಯಗಳು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಈ ಕ್ರೀಡೆಗೆ ರಾಜ್ಯದ ಪ್ರತಿಷ್ಟಿತ 25 ಕ್ರಿಕೆಟ್ ತಂಡಗಳು ಹಾಗೂ ಕೊರಟಗೆರೆ ತಾಲೂಕಿನ ಬಲಿಷ್ಟ ಎರಡು ತಂಡಗಳು ಭಾಗವಹಿಸಲಿವೆ ಎಂದರು. 

     ಈ ಕ್ರೀಡೆಯಲ್ಲಿ ಪ್ರಥಮ ಬಹುಮಾನ 2.22.222 ರೂಗಳು ಹಾಗೂ ಆಕರ್ಷಕ ಟ್ರೋಫಿ, ಎರಡನೇ ಬಹುಮಾನ 1.11.111 ರೂಗಳು ಹಾಗೂ ಆಕರ್ಷಕ ಟ್ರೋಪಿ, ಸರಣೀ ಶ್ರೇಷ್ಠ ಆಟಗಾರನಿಗೆ ಮೋಟಾರ್ ಬೈಕ್ ಬಹುಮಾನ, ಪ್ರತೀ ಪಂದ್ಯಕ್ಕೂ ಪಂದ್ಯಶ್ರೇಷ್ಠ ಪ್ರಶಸ್ತಿ ಹಾಗೂ ವಯಕ್ತಿಕ ವಿಶೇಷ ಪ್ರಶಸ್ತಿಗಳನ್ನು ನೀಡಲಾಗುವುದು ಎಂದರು.

    ಯುವ ಮುಖಂಡ ಶಿವು ಮಾತನಾಡಿ ಪಂದ್ಯಾವಳಿಗಳ ಏಪ್ರಿಲ್ 06 ರ ಕಡೆಯ ದಿನ ಭಾನುವಾರದಂದು ರಾಜ್ಯದ ಗೃಹ ಸಚಿವರು ಈ ಪಂದ್ಯಗಳ ಸಂಪೂರ್ಣ ಪ್ರಯೋಜಕರಾದ ಡಾ.ಜಿ.ಪರಮೇಶ್ವರರವರು ಆಗಮಿಸಿ ಕ್ರೀಡಾ ಪಟುಗಳಿಗೆ ಬಹುಮಾನ ನೀಡುವರು,

     ಏಪ್ರಿಲ್ 4ರ ಮೊದಲ ದಿನ ಮದ್ಯಾಹ್ನ 3-೦೦ ಪದ್ಯವಳಿಗಳ ಉದ್ಘಾಟನೆಯಾಗಲಿದ್ದು, ಉದ್ಘಾಟನೆಗೆ ತುಮಕೂರು ಜಿಲ್ಲೆಯ ಜಿ.ಪಂ.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಜಿಲ್ಲಾ ಮಟ್ಟದ ತಾಲ್ಲೂಕು ಮಟ್ಟದ ಅಧಿಕಾರಿಗಳು ಆಗಮಿಸಲಿದ್ದಾರೆ, ಎಲ್ಲಾ ಪಂದ್ಯಗಳು ನಾಕೌಟ್ ಮಾದರಿಯಲ್ಲಿ ನಡೆಯಲಿವೆ ಎಂದರು.

     ಯುವಕಾಂಗ್ರೆಸ್ ಅದ್ಯಕ್ಷ ಬೈರೇಶ್ ಮಾತನಾಡಿ ಈ ಪಂದ್ಯವಳಿಗಳಿಗೆ ಬರುವ ಎಲ್ಲಾ ಕ್ರೀಡಾ ಪಟುಗಳಿಗೆ ಬೆಳಗಿನ ಉಪಹಾರ, ಮದ್ಯಾಹ್ನ ಮತ್ತು ರಾತ್ರಿಯ ಊಟ, ವನ್ನು ವ್ಯವಸ್ಥೆ ಮಾಡಲಾಗಿದ್ದು ಕ್ರೀಡಾಪಟುಗಳಿಗೆ ಸಾರ್ವಜನಿಕರಿಗೂ ಸಹ ಊಟದ ವ್ಯವಸ್ಥೆ ಮಾಡಲಾಗಿದೆ, ಪಂದ್ಯದ ಎಲ್ಲಾ ತೀರ್ಪುಗಾರರು ಬೆಂಗಳೂರಿನ ಕ್ರೀಡಾ ಇಲಾಖೆಯಿಂದ ಆಗಮಿಸಲಿದ್ದು ಆಧುನಿಕ ತಂತ್ರಜ್ಞಾನದ ಮೂರನೇ ಅಂಪೈರ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದರು. ಘೋಷ್ಠ್ಠಿಯಲ್ಲಿ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷರುಗಳಾದ ಅರಕೆರೆ ಶಂಕರ್, ಅಶ್ವಥ್ಥ್ ನಾರಾಯಣ ಯುವ ಕಾಂಗ್ರೆಸ್ ಉಪಾದ್ಯಕ್ಷ ದೀಪಕ್, ಭರತ್, ರಂಜಿತ್, ರಘುವೀರ್, ಕಿರಣ್, ರಾಕೇಶ್, ಮಂಜುನಾಥ್, ಹರೀಶ್, ನಾಗಭೂಷಣ್, ಅಭಿ, ಸೇರಿದಂತೆ ಇತರರು ಹಾಜರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »