Karunadu Studio

ಕರ್ನಾಟಕ

ನಮ್ಮ ಮೆಟ್ರೋ: 6 ತಿಂಗಳಲ್ಲಿ 27,000 ಪ್ರಯಾಣಿಕರಿಂದ ನಿಯಮಗಳ ಉಲ್ಲಂಘನೆ


ಬೆಂಗಳೂರು

   ನಮ್ಮ ಮೆಟ್ರೋ  ನಮ್ಮ ಹೆಮ್ಮೆ.. ಬೆಂಗಳೂರಿಗರ ಜೀವನಾಡಿ. ಲಕ್ಷಾಂತರ ಜನರಿಗೆ ಆಧಾರವಾಗಿದೆ. ಮೆಟ್ರೋ ಅಂದರೆ ಸಾಕು ಜನರು ಮುಗಿಬೀಳುತ್ತಾರೆ. ಸಾಮಾನ್ಯವಾಗಿ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಕರು  ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಆದರೆ ಕಳೆದ 6 ತಿಂಗಳ ಅವಧಿಯಲ್ಲಿ, ಸುಮಾರು 27,000 ಪ್ರಯಾಣಿಕರು ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆದರೂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ದಂಡ ವಿಧಿಸಿಲ್ಲ.

   ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ನಮ್ಮ ಮೆಟ್ರೋ, ಸಪ್ಟೆಂಬರ್ 2024 ರಿಂದ ಮಾರ್ಚ್ 2025ರ ವರೆಗೆ ಅಂದರೆ ಕಳೆದ ಆರು ತಿಂಗಳಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ವಾಡಿಕೆಯ ಭದ್ರತಾ ತಪಾಸಣೆಯ ಪ್ರಕಾರ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000 ಕ್ಕೂ ಹೆಚ್ಚು ಘಟನೆಗಳು ಬಹಿರಂಗವಾಗಿದೆ ಎಂದು ತಿಳಿಸಿದೆ. 

  ಪ್ರಯಾಣಿಕರು ಮೊಬೈಲ್​ನಲ್ಲಿ ಜೋರಾಗಿ ಮ್ಯೂಸಿಕ್​ ಕೇಳುತ್ತಿದ್ದ ಒಟ್ಟು 11,922 ಪ್ರಕರಣಗಳು ದಾಖಲಾಗಿವೆ. ವಿಕಲಾಂಗ ವ್ಯಕ್ತಿಗಳು (PwD), ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಶಿಶುಗಳೊಂದಿಗೆ ಪ್ರಯಾಣಿಸುವವರಿಗೆ ಆದ್ಯತೆಯ ಆಸನಗಳನ್ನು ನೀಡದಿರುವ 14,162 ಪ್ರಕರಣಗಳು ಹಾಗೂ ರೈಲಿನಲ್ಲಿ ಪ್ರಯಾಣ ಮಾಡುವಾಗ ಪದಾರ್ಥಗಳ ಸೇವನೆಯ 554 ಪ್ರಕರಣಗಳು ಕಂಡುಬಂದಿವೆ. ಅಲ್ಲದೆ, 474 ಘಟನೆಗಳು ದೊಡ್ಡ ಗಾತ್ರದ ಲಗೇಜ್​ಗಳನ್ನು ಪ್ರಯಾಣಿಕರನ್ನು ಸಾಗಿಸುತ್ತಿರುವುದು ಕೂಡ ಕಂಡುಬಂದಿದೆ. 

   ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲವಾದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ. ಇದು ಪ್ರಯಾಣಿಕರಲ್ಲಿ ಹೆಚ್ಚಿನ ಅರಿವು ಮತ್ತು ಪರಿಗಣನೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ. 

   ಸುಗಮವಾದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ದಂಡ ವಿಧಿಸುವ ಅವಕಾಶಗಳನ್ನು ತಪ್ಪಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮವು ಪ್ರಯಾಣಿಕರಲ್ಲಿ ವಿನಂತಿಸಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »