Karunadu Studio

ಕರ್ನಾಟಕ

ಕ್ರೀಡಾ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜ ಸ್ವಸ್ಥದಿಂದ ಇರಲು ಸಾಧ್ಯ : ಡಾಕ್ಟರ್ ಜಿ ಪರಮೇಶ್ವರ್


 ಕೊರಟಗೆರೆ :-

     ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ 160 ಕೋಟಿ ರೂ ವೆಚ್ಚದಲ್ಲಿ ನಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಭರವಸೆಯಂತೆ ಮುಂದಿನ ವರ್ಷ ನಾವು ನೀವೆಲ್ಲರೂ ರಣಜಿ ಕ್ರಿಕೆಟ್ ಟೂರ್ನಮೆಂಟನ್ನ ವೀಕ್ಷಿಸಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಭರವಸೆ ನೀಡಿದರು.

    ಅವರು ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಡಾ. ಬಿ ಆರ್ ಅಂಬೇಡ್ಕರ್ ಅವರ 138ನೇ ಜಯಂತೋತ್ಸವ ಪ್ರಯುಕ್ತ ಕೊರಟಗೆರೆ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲ್ಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಹಾಗೂ “ಡಾ. ಜಿ ಪರಮೇಶ್ವರ್ ಕಪ್ ” ಪಂದ್ಯಾವಳಿ ಸಮಾರಂಭ ಉದ್ದೇಶಿಸಿ ಮಾತನಾಡುತ್ತಾ ತುಮಕೂರು ವಸಂತ ನರಸಾಪುರದ ಬಳಿ ಮುಂದಿನ ವರ್ಷ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆಗೊಂಡು ರಣಜಿ ಸೇರಿದಂತೆ ಇನ್ನಿತರ ರಾಜ್ಯ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ ಎಂದರು.

     ಕ್ರೀಡಾಪಟುವಾಗಿ ಕ್ರೀಡೆಗೆ ನಾನು ಮೊದಲಿನಿಂದಲೂ ಪ್ರೋತ್ಸಾಹ ಕೊಟ್ಟುಕೊಂಡು ಬಂದಿದ್ದೇನೆ, ನಾನು ಮೊದಲ ಬಾರಿಗೆ ಕೊರಟಗೆರೆ ಶಾಸಕರಾದ ಸಂದರ್ಭದಲ್ಲಿ ಜನತೆಗೆ ಭರವಸೆ ನೀಡಿದ್ದೆ, ಇಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನ ನಿರ್ಮಾಣಿಸುತ್ತೇನೆ ಎಂದು ಅದಕ್ಕೆ ಬದ್ಧರಾಗಿ ಈ ಮೈದಾನವನ್ನ ಸುಸಜ್ಜಿತ ಕ್ರೀಡಾ ಮೈದಾನವಾಗಿ ಮಾರ್ಪಡುವಂತಹ ಎಲ್ಲಾ ತರಹದ ಕಾರ್ಯ ಕೈಗೊಳ್ಳಲಾಗಿದೆ, ಇದೇ ವರ್ಷ ಜಿಲ್ಲಾ ಪಂಚಾಯಿತಿ ಸಿಇಒ 3.5 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮೇಲ್ದರ್ಜೆ ಏರಿಸುವ ಮೂಲಕ ಹೈಟೆಕ್ ಕ್ರೀಡಾ ಮೈದಾನವಾಗಲಿದೆ ಎಂದರು.

      ತುಮಕೂರು ಜಿಲ್ಲೆಯಲ್ಲಿ ಬಹಳಷ್ಟು ಜನ ಕ್ರೀಡಾಪಟುಗಳಿದ್ದಾರೆ ಫುಟ್ಬಾಲ್ ನಲ್ಲಿದ್ದಾರೆ ಕಬಡ್ಡಿಯಲ್ಲಿದ್ದಾರೆ, ಕೊಕ್ಕೋ ಲ್ಲಿದ್ದಾರೆ, ಕೊಕ್ಕೋದಲ್ಲಿ ಅನೇಕ ಸಂದರ್ಭದಲ್ಲಿ ಆಲ್ ಇಂಡಿಯಾ ಚಾಂಪಿಯನ್ ಹಾಗಿದ್ದರೆ ನಮ್ಮ ಟೀಮ್, ಕ್ರಿಕೆಟ್ ಅನ್ನು ಕೂಡ ಶಾಲಾ ಕಾಲೇಜಿನಲ್ಲಿ ಇರುವಂತಹ ಪ್ರತಿಭೆಗಳನ್ನು ಗುರುತಿಸಿ ಅಂತಹ ಪ್ರತಿಭೆಗಳನ್ನು ಹೊರ ತರುವಂತಹ ಕಾರ್ಯ ಮುಂದಿನ ದಿನಗಳಲ್ಲಿ ಸಂಬಂಧಪಟ್ಟಂತ ಇಲಾಖೆ ಹಾಗೂ ಸಂಸ್ಥೆಗಳ ಸೇರಿದಂತೆ ಕ್ರೀಡಾ ಸಂಸ್ಥೆಗಳಿಂದ ಕೈಗೊಳ್ಳಲಾಗುವುದು ಎಂದು ಅಭಿಪ್ರಾಯಪಟ್ಟರು.

 ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮುಖಂಡಾದ ಅಶೋಕ ರಾಜು ವರ್ಧನ್, ಎಡಿ ಬಲರಾಮಯ್ಯ, ಮಹಾಲಿಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ್, ಅರಕೆರೆ ಶಂಕರ್, ಪ. ಪಂ ಸದಸ್ಯ ಕೆ ಆರ್ ಓಬಳರಾಜ್ , ನಂದೀಶ್, ನಾಗರಾಜು, ಮಂಜುನಾಥ್ ಕ್ರಿಕೆಟ್ ಟೂರ್ನಮೆಂಟ್ ನ ಆಯೋಜಕರಾದ ನಂದೀಶ್, ಬೈರೇಶ್, ರಘುವೀರ್ , ಶಿವು , ದೀಪಕ್ , ರಂಜಿತ್ , ಕಿರಣ್ , ಗುಂಡ , ಗಗನ್ , ಕಿಶೋರ್, ಬಾಬು ಈ ಸಂದರ್ಭದಲ್ಲಿ ಹಾಜರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »