Karunadu Studio

ಕರ್ನಾಟಕ

ಸೈಡ್ ಪಿಕಪ್ ಹೆಸರಲ್ಲಿ ಟ್ಯಾಕ್ಸಿ ಚಾಲಕರಿಗೆ ಕಿರುಕುಳ….!


ದೇವನಹಳ್ಳಿ

    ನಿನ್ನೆ ಹೇಳಿ ಕೇಳಿ ಶ್ರೀರಾಮ ನವಮಿ  ಹಿಂದೂಗಳ ಪವಿತ್ರ ಹಬ್ಬ ಸಹ ಹೌದು. ಹೀಗಾಗೆ ಚಾಲಕರೆಲ್ಲಾ ಒಂದೆರೆಡು ಬಾಡಿಗೆ ಜಾಸ್ತಿ ಸಿಗುತ್ತೆ ಅಂತ ಏರ್ಪೋಟ್​ಗೆ ಬಂದಿದ್ದು ಪಿಕಪ್ ಮಾಡುವ ಭರದಲ್ಲಿದ್ದರು. ಆದರೆ ಅಷ್ಟರಲ್ಲೇ ಟ್ಯಾಕ್ಸಿ ಸಂಸ್ಥೆಗಳು ಮತ್ತು ಚಾಲಕರ ನಡುವೆ ಪಿಕಪ್ ವಿಚಾರಕ್ಕೆ ಕಿರಿಕ್ ಉಂಟಾಗಿದ್ದು, 20ಕ್ಕೂ ಅಧಿಕ ಟ್ಯಾಕ್ಸಿ ಚಾಲಕರು  ದಿನಪೂರ್ತಿ ಪೊಲೀಸ್ ಠಾಣೆ ಮುಂದೆ ಪರದಾಡಿರುವಂತಹ ಘಟನೆ ನಡೆದಿದೆ. 

   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ ನಿಲ್ಥಾಣದಿಂದ ಶೇ 50 ಕ್ಕೂ ಅಧಿಕ ಪ್ರಯಾಣಿಕರು ಟ್ಯಾಕ್ಸಿಗಳಲ್ಲೇ ಪ್ರಯಾಣ ಮಾಡ್ತಿದ್ದು, ಹಬ್ಬ ಹರಿದಿನ ಸೇರಿದಂತೆ ವೀಕೆಂಡ್ ಬಂತ್ತು ಅಂದರೆ ಟ್ಯಾಕ್ಸಿಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಹೀಗಾಗಿ ನಿನ್ನೆ ಶ್ರೀರಾಮ ನವಮಿ ಹಬ್ಬ ಇದೆ ಅಂತ ಕೆಲ ಚಾಲಕರು ಓಲಾ, ಉಬರ್ ಬಿಟ್ಟು ನಮ್ಮ ಯಾತ್ರಿ ಮತ್ತು ರಾಪಿಡೋ ಆ್ಯಪ್ ಮೂಲಕ ಪ್ರಯಾಣಿಕರನ್ನ ಪಿಕಪ್ ಮಾಡಿಕೊಳ್ಳುವುದಕ್ಕೆ ಬಂದಿದ್ರಂತೆ. ಹೀಗಾಗೆ ಎರೆಡೆರಡು ಆ್ಯಪ್ಗಳಲ್ಲಿ ಕೆಲಸ ಮಾಡುತ್ತೀರಾ ಅಂತ ಕೆಎಸ್‌ಟಿಡಿಸಿ ಸೇರಿದಂತೆ ಕೆಲ ಚಾಲಕರು ಕಿರಿಕ್ ಮಾಡಿದ್ದು, ಪ್ರಯಾಣಿಕರ ಪಿಕಪ್​ಗೆ ಬಂದ ಚಾಲಕರನ್ನ ಅಡ್ಡ ಹಾಕಿದ್ದರಂತೆ.ಅಲ್ಲದೆ ಅಡ್ಡ ಹಾಕಿದ ಟ್ಯಾಕ್ಸಿ ಚಾಲಕರ ಕೀ ಗಳನ್ನ ಕಿತ್ತುಕೊಂಡು ಬಳಿಕ ಆ ಕೀಗಳನ್ನ ಪೊಲೀಸರ ವಶಕ್ಕೆ ನೀಡಿದ್ದು, 20ಕ್ಕೂ ಹೆಚ್ಚು ಟ್ಯಾಕ್ಸಿಗಳನ್ನ ಮೊನ್ನೆ ರಾತ್ರಿಯಿಂದ ನಿನ್ನೆ ಸಂಜೆವರೆಗೂ ಕೆಂಪೇಗೌಡ ಏರ್ಪೋಟ್ ನಲ್ಲೆ ಪೊಲೀಸರು ಸೀಜ್ ಮಾಡಿ ನಿಲ್ಲಿಸಿದ್ದಾರೆ ಅಂತ ಚಾಲಕರು ಆಕ್ರೋಶ ಹೊರ ಹಾಕಿದ್ದಾರೆ.

   ನಿನ್ನೆ ಸಂಜೆಯಿಂದ ನೀವು ಅಕ್ರಮವಾಗಿ ಸೈಡ್ ಪಿಕಪ್ ಮಾಡಲು ಬಂದಿದ್ದೀರಾ ಅಂತ ಚಾಲಕರಿಗೆ ದಂಡವನ್ನು ಹಾಕದೆ, ಟ್ಯಾಕ್ಸಿಯನ್ನು ಬಿಡದೆ ಪೊಲೀಸರು ಟ್ಯಾಕ್ಸಿಗಳನ್ನ ನಿಲ್ಲಿಸಿಕೊಂಡಿದ್ದು, ಹಬ್ಬಕ್ಕೆ ಒಂದೆರಡು ಕಾಸು ಮಾಡಿಕೊಳ್ಳೋಣ ಅಂತ ಬಂದ ನಮಗೆ ಕಿರುಕುಳ ನೀಡ್ತಿದ್ದಾರೆ ಅಂತ ಚಾಲಕರು ಆಕ್ರೋಶ ಹೊರ ಹಾಕಿದ್ದಾರೆ. 

   ಅಲ್ಲದೆ ಏರ್ಪೋಟ್​ನ ಕೆಎಸ್ಟಿಡಿಸಿ ಚಾಲಕರು ಸೇರಿದಂತೆ ಬಿಐಎಎಲ್​ ಸಿಬ್ಬಂದಿ ಮಾತು ಕೇಳಿಕೊಂಡು ಪೊಲೀಸರು ನಮಗೆ ಕಿರುಕುಳ ನೀಡುತ್ತಿದ್ದು, ನಮಗೆ ನ್ಯಾಯ ಕೊಡಿಸಿ ಅಂತ ಚಾಲಕರು ಒತ್ತಾಯಿಸಿದರು. ಇನ್ನೂ ಈ ಕುರಿತು ಟಿವಿ9 ನಲ್ಲಿ ವರದಿ ಪ್ರಸಾರವಾಗ್ತಿದ್ದಂತೆ ಎಚ್ಚೆತ್ತ ಕೆಂಪೇಗೌಡ ಏರ್ಪೋಟ್ ಠಾಣೆ ಪೊಲೀಸರು ನಿಲ್ಲಿಸಿದ್ದ 20ಕ್ಕೂ ಅಧಿಕ ಕ್ಯಾಬ್​​ಗಳನ್ನ ಬಿಟ್ಟು ಕಳಿಸಿದ್ದಾರೆ. 

   ಹಬ್ಬದಂದು ಒಂದೆರಡು ಟ್ರಿಪ್ ಹೆಚ್ಚು ಮಾಡಿಕೊಳ್ಳೋಣ ಅಂತ ಏರ್ಪೋಟ್​ಗೆ ಬಂದ ಟ್ಯಾಕ್ಸಿ ಚಾಲಕರಿಗೆ ಕೆಲ ಚಾಲಕರು ಮಾಡಿದ ಎಡವಟ್ಟಿನಿಂದ ದಿನಪೂರ್ತಿ ಪರದಾಡುವಂತಾಗಿತ್ತು. ಇನ್ನೂ ಇತ್ತೀಚೆಗೆ ಕೆಂಪೇಗೌಡ ಏರ್ಪೋಟ್​ನಲ್ಲಿ ಸೈಡ್ ಪಿಕಪ್ ಚಾಲಕರ ಹಾವಳಿಯು ಹೆಚ್ಚಾಗಿದ್ದು, ಏರ್ಪೋಟ್ ಸಿಬ್ಬಂದಿ ಮತ್ತು ಪೊಲೀಸರು ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »