Karunadu Studio

ಕರ್ನಾಟಕ

Earthquake: ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ; ಕಾಶ್ಮೀರ ಸೇರಿದಂತೆ ಹಲವು ಕಡೆ ಕಂಪನದ ಅನುಭವ – Kannada News | Tremors jolt Srinagar, other parts of J&K as 5.3-magnitude earthquake hits Pakistan


ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ಆಳ 10 ಕಿ.ಮೀ ಆಗಿದ್ದು, ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಶ್ರೀನಗರ, ಜಮ್ಮು, ಶೋಪಿಯಾನ್ ಮತ್ತು ಕಾಶ್ಮೀರ ಪ್ರದೇಶದ ಹಲವಾರು ಇತರ ಭಾಗಗಳಲ್ಲಿ ಜನರು ಕಂಪನದ ಅನುಭವವನ್ನು ಅನುಭವಿಸಿದ್ದಾರೆ. ಆದಾಗ್ಯೂ, ಕಣಿವೆಯಲ್ಲಿ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿಗೆ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಭೂಕಂಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಸಂಭವಿಸಿದ ಭೂಕಂಪದ ಭಯಾನಕ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ. ಒಂದು ವೀಡಿಯೊದಲ್ಲಿ ದಿನಸಿ ಅಂಗಡಿಯೊಳಗೆ ಒಬ್ಬ ವ್ಯಕ್ತಿ ಮಗುವಿನೊಂದಿಗೆ ಇರುವುದನ್ನು ತೋರಿಸಲಾಗಿದೆ, ಆಗ ಇದ್ದಕ್ಕಿದ್ದಂತೆ ಕ್ಯಾಮೆರಾ ಮತ್ತು ಅಂಗಡಿ ಅಲುಗಾಡಲು ಪ್ರಾರಂಭಿಸಿದವು. ಆ ವ್ಯಕ್ತಿ ಮಗುವಿನೊಂದಿಗೆ ಅಂಗಡಿಯಿಂದ ಹೊರಗೆ ಧಾವಿಸಿದ್ದಾನೆ.

ವೆದರ್ ಮಾನಿಟರ್ ಎಂಬ ಖಾತೆಯು ಹಂಚಿಕೊಂಡಿರುವ ಮತ್ತೊಂದು ವೀಡಿಯೊದಲ್ಲಿ, ಕಂಪನದ ಅನುಭವವಾದ ನಂತರ ಜನರು ರಸ್ತೆಗಳಲ್ಲಿ ಜಮಾಯಿಸುತ್ತಿರುವುದನ್ನು ತೋರಿಸಲಾಗಿದೆ. ಜನರು ಕಟ್ಟಗಳನ್ನು ತೊರೆದು ರಸ್ತೆಗೆ ಓಡಿ ಬಂದಿದ್ದಾರೆ. ಮತ್ತೊಂದು ವಿಡಿಯೋದಲ್ಲಿ ಇಸ್ಲಾಮಾಬಾದ್‌ನಲ್ಲಿ ಭೂಕಂಪ ಸಂಭಿಸಿರುವುದು ಕಾಣಿಸುತ್ತದೆ.

ಮಾರ್ಚ್ 28ರ ಶುಕ್ರವಾರ ಭೀಕರ ಭೂಕಂಪನ ಸಂಭವಿಸಿ, ಈಗಾಗಲೇ 3,600ಕ್ಕೂ ಹೆಚ್ಚು ಜನರು ಮ್ಯಾನ್ಮಾರ್ ದೇಶದಲ್ಲಿ ಬಲಿಯಾಗಿದ್ದಾರೆ. ಪ್ರಬಲವಾದ ಭೂಕಂಪಕ್ಕೆ ಮ್ಯಾನ್ಮಾರ್‌ ನಡುಗಿ ಹೋಗಿದೆ. ಭೂಕಂಪ ಪೀಡಿತ ರಾಷ್ಟ್ರಕ್ಕೆ ಹಲವು ದೇಶಗಳು ಸಹಾಯ ಮಾಡುತ್ತಿವೆ. ಭಾರತ ಈಗಾಗಲೇ ಎನ್‌ಡಿಆರ್‌ಎಫ್‌ ತಂಡವನ್ನು ಕಳುಹಿಸಿದೆ. ಅಷ್ಟೇ ಅಲ್ಲದೆ ವೈದ್ಯಕೀಯ ಸಾಮಗ್ರಿ ಹಾಗೂ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »